‘ಸಮಾನ ಪಿಂಚಣಿಗೆ ಆಗ್ರಹಿಸಿ ಕೆಲ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅಕ್ಟೋಬರ್ನಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದಾಗ, ಆಗ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್.ಯಡಿಯೂರಪ್ಪ ಬೆಂಬಲ ಸೂಚಿಸಿದ್ದರು. ಪಿಂಚಣಿ ಪ್ರತಿಯೊಬ್ಬ ನೌಕರನ ಮೂಲಭೂತ ಹಕ್ಕು ಎಂದಿದ್ದರು. ಇದೀಗ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ನಮ್ಮ ಬೇಡಿಕೆ ಈಡೇರಿಸಬೇಕು’ ಎಂದು ಒತ್ತಾಯಿಸಿದರು.