ಮೈಸೂರು: ಕೋವಿಡ್-19 ಹಿನ್ನೆಲೆ ಹಾಗೂ ಸರ್ಕಾರದ ನಿರ್ದೇಶನದಂತೆ ಚಾಮುಂಡೇಶ್ವರಿ ದೇಗುಲ, ಚಾಮುಂಡಿ ಬೆಟ್ಟ, ಉತ್ತನಹಳ್ಳಿಯ ಜ್ವಾಲಾತ್ರಿಪುರ ಸುಂದರಿ ದೇಗುಲಕ್ಕೆ ಆಷಾಢ ಮಾಸದ ಅಮಾವಾಸ್ಯೆ, ಶುಕ್ರವಾರ, ಚಾಮುಂಡಿ ವರ್ಧಂತಿ ಮತ್ತು ಆಷಾಢ ಮಾಸದಲ್ಲಿ ಬರುವ ಎಲ್ಲಾ ಶನಿವಾರ, ಭಾನುವಾರ, ಸಾರ್ವತ್ರಿಕ ರಜಾ ದಿನಗಳಂದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.