ಆ ಅವಧಿಯಲ್ಲಿ ಭಕ್ತರು ಮೆಟ್ಟಿಲುಗಳನ್ನು ಹತ್ತುವುದು, ಬೆಟ್ಟದ ದೇಗುಲಗಳಲ್ಲಿ ದಾಸೋಹ, ಊಟದ ವ್ಯವಸ್ಥೆ, ಪ್ರಸಾದ ವಿತರಣೆಯನ್ನೂ ನಿಷೇಧಿಸಲಾಗಿದೆ. ಚಾಮುಂಡೇಶ್ವರಿ ದೇಗುಲದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಅಧಿಕಾರಿಗಳು, ಅರ್ಚಕರು ಹಾಗೂ ದೇಗುಲದ ಸಿಬ್ಬಂದಿಯು ದೇವಾಲಯದ ಆವರಣದಲ್ಲಿ ಮಾತ್ರವೇ ನಡೆಸಬೇಕು ಎಂದು ಸೂಚಿಸಿದ್ದಾರೆ.