‘ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ದೇಹವನ್ನು ಮಂಗಳವಾರ ಆಂಬುಲೆನ್ಸ್ನಲ್ಲಿ ‘ಗ್ರೀನ್ ಕಾರಿಡಾರ್’ (ಜೀರೊ ಟ್ರಾಫಿಕ್) ವ್ಯವಸ್ಥೆ ಮೂಲಕ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಬಿಜಿಎಸ್ ಆಸ್ಪತ್ರೆಯಲ್ಲಿ ವೈದ್ಯರು ಹೆಚ್ಚಿನ ಪರಿಶೀಲನೆ ನಡೆಸಿ ಅಂಗಾಂಗ ಬೇರ್ಪಡಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಅಂಗಾಂಗ ದಾನಕ್ಕೆ ಕುಟುಂಬ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಸುಯೋಗ್ ಆಸ್ಪತ್ರೆಯ ಹಿರಿಯ ವ್ಯವಸ್ಥಾಪಕ (ಕಾರ್ಯಾಚರಣೆ) ಅರುಣ್ ಕುಮಾರ್ ತಿಳಿಸಿದರು.