ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ, ‘ಜನಸನ್ನಿಧಿ’ ಆವರಣದಲ್ಲಿ ಅನುಮತಿ ಪಡೆಯದೆ ಈಜುಕೊಳ ನಿರ್ಮಿಸಿದ್ದ ಕುರಿತಂತೆ ಶಾಸಕ ಸಾ.ರಾ.ಮಹೇಶ್, ಜೆಡಿಎಸ್ ಮುಖಂಡ ಕೆ.ವಿ.ಮಲ್ಲೇಶ್ ಮತ್ತು ತುಮಕೂರಿನ ವಿಶ್ವಮಾನವ ಹಕ್ಕುಗಳ ಸಂಘಟನೆಯ ಅಧ್ಯಕ್ಷ ಸಿದ್ದಲಿಂಗೇಗೌಡ ದೂರು ನೀಡಿದ್ದರು. ಈ ದೂರಿನ ಮೇರೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಸೂಚನೆಯಂತೆ ಪ್ರಾದೇಶಿಕ ಆಯುಕ್ತರು ತನಿಖೆ ನಡೆಸಿದ್ದರು. ‘ತನಿಖೆಯ ವರದಿಯನ್ನು ಶನಿವಾರವೇ (ಜೂನ್ 19) ಸಲ್ಲಿಸಿದ್ದೇನೆ’ ಎಂದಷ್ಟೇ ಜಿ.ಸಿ.ಪ್ರಕಾಶ್ ಪ್ರತಿಕ್ರಿಯಿಸಿದರು.