ಈಚೆಗೆ ನಡೆದ ಬಿಜೆಪಿಯ ಜನ ಸಂವಾದದಲ್ಲಿ ಬಿ.ಎಲ್.ಸಂತೋಷ್ ‘ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ’ ಎಂದಿರುವುದಕ್ಕೆ ತಿರುಗೇಟು ನೀಡಿದ ಮಾಜಿ ಸಂಸದರು, ‘ಕಾಂಗ್ರೆಸ್ ಕುದುರೆಗಳನ್ನು ಖರೀದಿಸಿ ಸರ್ಕಾರ ರಚಿಸಿದವರು ನೀವು. ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿದ್ದೀರಿ. ನಿಮ್ಮ ಮಾತು ಸರಿಯಾಗಿಯೇ ಇದೆ. ಆದರೆ ಇದು ಮೋದಿ ಆಡಳಿತಕ್ಕೆ ಸರಿ ಹೊಂದಲಿದೆ’ ಎಂದು ಲೇವಡಿ ಮಾಡಿದರು.