<p>ಮೈಸೂರು: ಪ್ರಮುಖ ಪ್ರವಾಸೋದ್ಯಮ ತಾಣ ಎನಿಸಿರುವ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ಯೋಜನೆ ನನೆಗುದಿಗೆ ಬಿದ್ದಿದ್ದು, ಭೂಸ್ವಾಧೀನ ಸಂಬಂಧ ರೈತರಿಗೆ ಪರಿಹಾರ ನೀಡುವ ಆಸಕ್ತಿಯನ್ನೇ ರಾಜ್ಯ ಸರ್ಕಾರ ತೋರುತ್ತಿಲ್ಲ.</p>.<p>ಇದೇ ಸಮಯದಲ್ಲಿ ಶಿವಮೊಗ್ಗ ಹಾಗೂ ಹಾಸನ ನಿಲ್ದಾಣಗಳ ನಿರ್ಮಾಣ ಯೋಜನೆಯತ್ತ ಗಮನ ಹರಿಸಿದ್ದು, ಹೆಚ್ಚಿನ ಅನುದಾನವನ್ನೂ ಬಿಡುಗಡೆ ಮಾಡಲಾಗುತ್ತಿದೆ.</p>.<p>ವಿಮಾನ ನಿಲ್ದಾಣದ ಮುಂದೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗೆ (ಮೈಸೂರು–ನಂಜನಗೂಡು) ಅಂಡರ್ಪಾಸ್ ನಿರ್ಮಿಸಿ ಅದರ ಮೇಲೆ ರನ್ವೇ ಅಭಿವೃದ್ಧಿಪಡಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಒಪ್ಪಿಗೆ ಸೂಚಿಸಿ, ₹ 700 ಕೋಟಿ ಅನುದಾನವನ್ನೂ ಮೀಸಲಿಟ್ಟಿದೆ. ತಾಂತ್ರಿಕ ಅಧಿಕಾರಿಗಳು ಮಣ್ಣಿನ ಸಾಮರ್ಥ್ಯ ಪರೀಕ್ಷಿಸಿ, ಹಸಿರು ನಿಶಾನೆ ಕೂಡ ತೋರಿದ್ದಾರೆ. ಭದ್ರತಾ ಒಪ್ಪಿಗೆಯೂ ಲಭಿಸಿದೆ.</p>.<p>ಮೈಸೂರು ಬೆಳವಣಿಗೆಗೆ ಪೂರಕವಾಗಿ ನಿಲ್ದಾಣದ ರನ್ವೇ ವಿಸ್ತರಣೆ ಅಗತ್ಯವಿರುವುದಾಗಿ ಉದ್ಯಮಿಗಳು, ಹೋಟೆಲ್, ಶಿಕ್ಷಣ ಕ್ಷೇತ್ರದವರು ಹಾಗೂ ಪ್ರವಾಸಿ ಪ್ರವೃತ್ತಕರು ಸರ್ಕಾರವನ್ನು ಒತ್ತಾಯಿಸುತ್ತಲೇ ಇದ್ದಾರೆ. ದೇಶ–ವಿದೇಶದಲ್ಲಿ ನೆಲೆಸಿರುವ ಮೈಸೂರಿಗರು ಸಾಮಾಜಿಕ ಜಾಲತಾಣದಲ್ಲೂ ಮನವಿ ಮಾಡುತ್ತಿದ್ದಾರೆ.</p>.<p>ಸದ್ಯ 1,740 ಮೀಟರ್ ಉದ್ದದ ರನ್ವೇ ಇದೆ. ಅದನ್ನು ಮತ್ತೆ 1,010 ಮೀಟರ್ ವಿಸ್ತರಿಸುವ ಅಗತ್ಯವಿದೆ. ವಿಸ್ತರಣೆಯಾದಲ್ಲಿ ದೊಡ್ಡ ವಿಮಾನಗಳು (ಏರ್ ಬಸ್, ಬೋಯಿಂಗ್ ಜೆಟ್) ಬಂದಿಳಿಯಲು ಸಾಧ್ಯವಾಗಲಿದ್ದು, ವಿದೇಶಕ್ಕೂ ಸಂಪರ್ಕ ಕಲ್ಪಿಸಬಹುದು.</p>.<p>ಈ ಉದ್ದೇಶಕ್ಕೆ ಒಟ್ಟು 280 ಎಕರೆ ಜಮೀನು ಬೇಕಿದೆ. ಭೂಮಿ ನೀಡಲು ಮುಂದಾಗಿರುವ ರೈತರಿಗೆ ಆರಂಭಿಕವಾಗಿ 114 ಎಕರೆಗೆ ತಲಾ ₹ 1.5 ಕೋಟಿ ನೀಡಲು ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಆದರೆ, ಹಣ ಬಿಡುಗಡೆ ಮಾಡಿಲ್ಲ.</p>.<p>ಯೋಜನೆಗೆ ಒಪ್ಪಿಗೆ ಲಭಿಸಿ ಮೂರೂವರೆ ವರ್ಷಗಳಾಗಿದ್ದು, ಮತ್ತಷ್ಟು ವಿಳಂಬವಾದರೆ ಅನುದಾನವನ್ನು ಪ್ರಾಧಿಕಾರವು ಬೇರೆಡೆಗೆ ವರ್ಗಾಯಿಸುವ ಆತಂಕ ನಿಲ್ದಾಣದ ಅಧಿಕಾರಿಗಳಿಗೆ ಎದುರಾಗಿದೆ.</p>.<p>‘ಭೂಮಿಯು ನಮ್ಮ ಸುಪರ್ದಿಗೆ ಬರಲೆಂದು ಕಾಯುತ್ತಿದ್ದೇವೆ. ರಾಜ್ಯ ಸರ್ಕಾರವು ಜಮೀನು ನೀಡುತ್ತಿದ್ದಂತೆ ಕಾರ್ಯಪ್ರವೃತ್ತರಾಗುತ್ತೇವೆ’ ಎಂದು ನಿಲ್ದಾಣದ ನಿರ್ದೇಶಕ ಆರ್.ಮಂಜುನಾಥ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>ಈ ನಿಟ್ಟಿನಲ್ಲಿ ಸಂಸದ ಪ್ರತಾಪಸಿಂಹ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಕೂಡ ರಾಜ್ಯ ಸರ್ಕಾದ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ.</p>.<p class="Subhead">ಅಭಿವೃದ್ಧಿಗೆ ವಿಮಾನ ನಿಲ್ದಾಣದ ನೆರವು: ಯಾವುದೇ ನಗರದ ಬೆಳವಣಿಗೆ ಅಲ್ಲಿನ ಮೂಲಸೌಲಭ್ಯಗಳ ಮೇಲೆ ಅವಲಂಬಿತವಾಗಿರುತ್ತದೆ. ಶಿಕ್ಷಣ, ಪ್ರವಾಸೋದ್ಯಮ, ರಿಯಲ್ ಎಸ್ಟೇಟ್, ಬಂಡವಾಳ ಹೂಡಿಕೆ, ಕೈಗಾರಿಕೆ, ಉದ್ಯೋಗಕ್ಕೆ ಮಹತ್ವ ಸಿಕ್ಕಂತೆ ಆ ನಗರಿಗೊಂದು ಅಸ್ಮಿತೆ ಸಿಗುತ್ತದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣಗಳು ಕೂಡ ಮಹತ್ವದ ಪಾತ್ರ ವಹಿಸುತ್ತವೆ.</p>.<p>ಕೇಂದ್ರ ಸರ್ಕಾರದ ‘ಉಡಾನ್’ ಯೋಜನೆ ಬಳಿಕ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಎಟಿಆರ್ ವಿಮಾನಗಳು ಹಾರಾಟ ನಡೆಸುತ್ತಿವೆ.</p>.<p>‘ರನ್ವೇ ವಿಸ್ತರಣೆ ಜೊತೆಗೆ ಪ್ರಮುಖ ನಗರಗಳಿಗೆ ವಿಮಾನ ಸಂಪರ್ಕ ಸಾಧ್ಯವಾದರೆ ಪ್ರವಾಸೋದ್ಯಮ, ಕೈಗಾರಿಗೆ ಉತ್ತೇಜನ ದೊರೆಯಲಿದೆ. ಉದ್ಯೋಗಾವಕಾಶಗಳು ಹೆಚ್ಚುತ್ತವೆ. ಸಾಫ್ಟ್ವೇರ್ ಕಂಪನಿಗಳು ಬರಲಿದ್ದು, ಐಟಿ ಉದ್ಯಮವೂ ಬೆಳೆಯುತ್ತದೆ’ ಎಂಬ ಆಶಾವಾದ<br />ಉದ್ಯಮಿಗಳದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಪ್ರಮುಖ ಪ್ರವಾಸೋದ್ಯಮ ತಾಣ ಎನಿಸಿರುವ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ಯೋಜನೆ ನನೆಗುದಿಗೆ ಬಿದ್ದಿದ್ದು, ಭೂಸ್ವಾಧೀನ ಸಂಬಂಧ ರೈತರಿಗೆ ಪರಿಹಾರ ನೀಡುವ ಆಸಕ್ತಿಯನ್ನೇ ರಾಜ್ಯ ಸರ್ಕಾರ ತೋರುತ್ತಿಲ್ಲ.</p>.<p>ಇದೇ ಸಮಯದಲ್ಲಿ ಶಿವಮೊಗ್ಗ ಹಾಗೂ ಹಾಸನ ನಿಲ್ದಾಣಗಳ ನಿರ್ಮಾಣ ಯೋಜನೆಯತ್ತ ಗಮನ ಹರಿಸಿದ್ದು, ಹೆಚ್ಚಿನ ಅನುದಾನವನ್ನೂ ಬಿಡುಗಡೆ ಮಾಡಲಾಗುತ್ತಿದೆ.</p>.<p>ವಿಮಾನ ನಿಲ್ದಾಣದ ಮುಂದೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗೆ (ಮೈಸೂರು–ನಂಜನಗೂಡು) ಅಂಡರ್ಪಾಸ್ ನಿರ್ಮಿಸಿ ಅದರ ಮೇಲೆ ರನ್ವೇ ಅಭಿವೃದ್ಧಿಪಡಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಒಪ್ಪಿಗೆ ಸೂಚಿಸಿ, ₹ 700 ಕೋಟಿ ಅನುದಾನವನ್ನೂ ಮೀಸಲಿಟ್ಟಿದೆ. ತಾಂತ್ರಿಕ ಅಧಿಕಾರಿಗಳು ಮಣ್ಣಿನ ಸಾಮರ್ಥ್ಯ ಪರೀಕ್ಷಿಸಿ, ಹಸಿರು ನಿಶಾನೆ ಕೂಡ ತೋರಿದ್ದಾರೆ. ಭದ್ರತಾ ಒಪ್ಪಿಗೆಯೂ ಲಭಿಸಿದೆ.</p>.<p>ಮೈಸೂರು ಬೆಳವಣಿಗೆಗೆ ಪೂರಕವಾಗಿ ನಿಲ್ದಾಣದ ರನ್ವೇ ವಿಸ್ತರಣೆ ಅಗತ್ಯವಿರುವುದಾಗಿ ಉದ್ಯಮಿಗಳು, ಹೋಟೆಲ್, ಶಿಕ್ಷಣ ಕ್ಷೇತ್ರದವರು ಹಾಗೂ ಪ್ರವಾಸಿ ಪ್ರವೃತ್ತಕರು ಸರ್ಕಾರವನ್ನು ಒತ್ತಾಯಿಸುತ್ತಲೇ ಇದ್ದಾರೆ. ದೇಶ–ವಿದೇಶದಲ್ಲಿ ನೆಲೆಸಿರುವ ಮೈಸೂರಿಗರು ಸಾಮಾಜಿಕ ಜಾಲತಾಣದಲ್ಲೂ ಮನವಿ ಮಾಡುತ್ತಿದ್ದಾರೆ.</p>.<p>ಸದ್ಯ 1,740 ಮೀಟರ್ ಉದ್ದದ ರನ್ವೇ ಇದೆ. ಅದನ್ನು ಮತ್ತೆ 1,010 ಮೀಟರ್ ವಿಸ್ತರಿಸುವ ಅಗತ್ಯವಿದೆ. ವಿಸ್ತರಣೆಯಾದಲ್ಲಿ ದೊಡ್ಡ ವಿಮಾನಗಳು (ಏರ್ ಬಸ್, ಬೋಯಿಂಗ್ ಜೆಟ್) ಬಂದಿಳಿಯಲು ಸಾಧ್ಯವಾಗಲಿದ್ದು, ವಿದೇಶಕ್ಕೂ ಸಂಪರ್ಕ ಕಲ್ಪಿಸಬಹುದು.</p>.<p>ಈ ಉದ್ದೇಶಕ್ಕೆ ಒಟ್ಟು 280 ಎಕರೆ ಜಮೀನು ಬೇಕಿದೆ. ಭೂಮಿ ನೀಡಲು ಮುಂದಾಗಿರುವ ರೈತರಿಗೆ ಆರಂಭಿಕವಾಗಿ 114 ಎಕರೆಗೆ ತಲಾ ₹ 1.5 ಕೋಟಿ ನೀಡಲು ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಆದರೆ, ಹಣ ಬಿಡುಗಡೆ ಮಾಡಿಲ್ಲ.</p>.<p>ಯೋಜನೆಗೆ ಒಪ್ಪಿಗೆ ಲಭಿಸಿ ಮೂರೂವರೆ ವರ್ಷಗಳಾಗಿದ್ದು, ಮತ್ತಷ್ಟು ವಿಳಂಬವಾದರೆ ಅನುದಾನವನ್ನು ಪ್ರಾಧಿಕಾರವು ಬೇರೆಡೆಗೆ ವರ್ಗಾಯಿಸುವ ಆತಂಕ ನಿಲ್ದಾಣದ ಅಧಿಕಾರಿಗಳಿಗೆ ಎದುರಾಗಿದೆ.</p>.<p>‘ಭೂಮಿಯು ನಮ್ಮ ಸುಪರ್ದಿಗೆ ಬರಲೆಂದು ಕಾಯುತ್ತಿದ್ದೇವೆ. ರಾಜ್ಯ ಸರ್ಕಾರವು ಜಮೀನು ನೀಡುತ್ತಿದ್ದಂತೆ ಕಾರ್ಯಪ್ರವೃತ್ತರಾಗುತ್ತೇವೆ’ ಎಂದು ನಿಲ್ದಾಣದ ನಿರ್ದೇಶಕ ಆರ್.ಮಂಜುನಾಥ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>ಈ ನಿಟ್ಟಿನಲ್ಲಿ ಸಂಸದ ಪ್ರತಾಪಸಿಂಹ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಕೂಡ ರಾಜ್ಯ ಸರ್ಕಾದ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ.</p>.<p class="Subhead">ಅಭಿವೃದ್ಧಿಗೆ ವಿಮಾನ ನಿಲ್ದಾಣದ ನೆರವು: ಯಾವುದೇ ನಗರದ ಬೆಳವಣಿಗೆ ಅಲ್ಲಿನ ಮೂಲಸೌಲಭ್ಯಗಳ ಮೇಲೆ ಅವಲಂಬಿತವಾಗಿರುತ್ತದೆ. ಶಿಕ್ಷಣ, ಪ್ರವಾಸೋದ್ಯಮ, ರಿಯಲ್ ಎಸ್ಟೇಟ್, ಬಂಡವಾಳ ಹೂಡಿಕೆ, ಕೈಗಾರಿಕೆ, ಉದ್ಯೋಗಕ್ಕೆ ಮಹತ್ವ ಸಿಕ್ಕಂತೆ ಆ ನಗರಿಗೊಂದು ಅಸ್ಮಿತೆ ಸಿಗುತ್ತದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣಗಳು ಕೂಡ ಮಹತ್ವದ ಪಾತ್ರ ವಹಿಸುತ್ತವೆ.</p>.<p>ಕೇಂದ್ರ ಸರ್ಕಾರದ ‘ಉಡಾನ್’ ಯೋಜನೆ ಬಳಿಕ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಎಟಿಆರ್ ವಿಮಾನಗಳು ಹಾರಾಟ ನಡೆಸುತ್ತಿವೆ.</p>.<p>‘ರನ್ವೇ ವಿಸ್ತರಣೆ ಜೊತೆಗೆ ಪ್ರಮುಖ ನಗರಗಳಿಗೆ ವಿಮಾನ ಸಂಪರ್ಕ ಸಾಧ್ಯವಾದರೆ ಪ್ರವಾಸೋದ್ಯಮ, ಕೈಗಾರಿಗೆ ಉತ್ತೇಜನ ದೊರೆಯಲಿದೆ. ಉದ್ಯೋಗಾವಕಾಶಗಳು ಹೆಚ್ಚುತ್ತವೆ. ಸಾಫ್ಟ್ವೇರ್ ಕಂಪನಿಗಳು ಬರಲಿದ್ದು, ಐಟಿ ಉದ್ಯಮವೂ ಬೆಳೆಯುತ್ತದೆ’ ಎಂಬ ಆಶಾವಾದ<br />ಉದ್ಯಮಿಗಳದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>