ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವನಾಥ್‌ಗೆ ಬಂದಿರುವ ಸ್ಥಿತಿ ಎಲ್ಲರಿಗೂ ಪಾಠ: ಸಾ.ರಾ.ಮಹೇಶ್

Last Updated 20 ಜೂನ್ 2020, 13:04 IST
ಅಕ್ಷರ ಗಾತ್ರ

ಮೈಸೂರು: ಮತದಾರರಿಗೆ ಹಾಗೂ ಪಕ್ಷಕ್ಕೆ ದ್ರೋಹ ಬಗೆದರೆ ರಾಜಕೀಯ ಜೀವನ ಹೇಗೆ ದುರಂತ ಅಂತ್ಯ ಕಾಣುತ್ತದೆ ಎಂಬುದಕ್ಕೆ ವಿಶ್ವನಾಥ್ ಉತ್ತಮ ಉದಾಹರಣೆ. ಇವರಿಗೆ ಒದಗಿದ ಸ್ಥಿತಿ ಎಲ್ಲ ಪಕ್ಷದ ರಾಜಕಾರಣಿಗಳಿಗೆ ದೊಡ್ಡ ಪಾಠ ಎಂದು ಶಾಸಕ ಸಾ.ರಾ.ಮಹೇಶ್ ವ್ಯಂಗ್ಯವಾಡಿದರು.

ಜೆಡಿಎಸ್‌ ಹಾಕಿದ ಭಿಕ್ಷೆಯಿಂದ ಇವರು ಚಲಾವಣೆಗೆ ಬಂದರು. ಇವರ ಮೇಲೆ ಪಕ್ಷದ ಕಾರ್ಯಕರ್ತರ ಋಣ ಇದೆ. ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡುವ ನೈತಿಕತೆ ಇವರಿಗೆ ಇಲ್ಲ. ಇನ್ನು ಮುಂದೆ ಹಗುರ ಮಾತನಾಡಬಾರದು ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಇನ್ನು ವಿಶ್ವನಾಥ್ ಅವರು ರಾಜಕೀಯದಲ್ಲಿ ಮುಂದುವರಿಯಬೇಕಾದರೆ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಮುಂದೆ ಬರುತ್ತವೆ. ಅವುಗಳಲ್ಲಿ ಬೇಕಾದರೆ ಸ್ಪರ್ಧಿಸಲಿ ಎಂದು ಚಾಟಿ ಬೀಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT