ಕಾವೇರಿ ಕಣಿವೆಯ ಜಲಾಶಯಗಳಲ್ಲಿ ಕೇವಲ 18 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಿದೆ. ಆದರೆ, ಕಾವೇರಿ ನೀರು ನಿರ್ವಹಣಾ ಮಂಡಳಿ ಕರ್ನಾಟಕದಿಂದ ತಮಿಳುನಾಡಿಗೆ 41 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವುದು ಅವೈಜ್ಞಾನಿಕ. ಶುಕ್ರವಾರದಿಂದಲೇ ನೀರು ಬಿಡಲು ಆರಂಭಿಸಲಾಗಿದೆ. ಇದು ಸರಿಯಲ್ಲ ಎಂದು ಹರಿಹಾಯ್ದರು.