<p><strong>ಹುಣಸೂರು</strong>: ಬಿಜೆಪಿ ಶಾಸಕ ಸಿದ್ದು ಸವದಿ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಗುರುವಾರ ಇಲ್ಲಿ ಆಗ್ರಹಿಸಿದರು.</p>.<p>‘ಪುರಸಭೆ ಅಧ್ಯಕ್ಷ–ಉಪಾಧ್ಯಕ್ಷ ಚುನಾವಣೆ ವೇಳೆ, ಪುರಸಭೆ ಸದಸ್ಯೆಯೊಂದಿಗಿನ ಅವರ ವರ್ತನೆಯಿಂದ ಮಹಿಳೆಯರ ರಾಜಕೀಯ ಸ್ವಾತಂತ್ರ್ಯ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಘಟನೆ ನಡೆದು, 54 ಗಂಟೆ ಕಳೆದಿದ್ದರೂ ಅವರ ವಿರುದ್ಧ ಪಕ್ಷವು ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ಕಿಡಿಕಾರಿದರು.</p>.<p>‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ‘ಕೋಮಾ’ಗೆ ಸರಿದಿದೆ ಎನ್ನಲು ಈ ಘಟನೆ ಜೀವಂತ ಉದಾಹರಣೆ. ಮಹಿಳೆ ಎಂಬ ಒಂದೇ ಕಾರಣಕ್ಕೆ ಸ್ಥಳೀಯ ಜನಪ್ರತಿನಿಧಿ ಎಂಬುದನ್ನು ಗಮನಕ್ಕೆ ತೆಗೆದುಕೊಳ್ಳದೆ ಶಾಸಕರು ಕೈ ಹಿಡಿದು ಎಳೆದಾಡಿರುವುದು ಸಮಂಜಸವೇ’ ಎಂದು ಪ್ರಶ್ನಿಸಿದರು.</p>.<p>‘ವಿರೋಧ ಪಕ್ಷದವರು ಎಲ್ಲದಕ್ಕೂ ಟೀಕೆ ಮಾಡುತ್ತಾರೆ ಎನ್ನುವ ಸಚಿವ ಸಿ.ಟಿ.ರವಿ ಈ ಘಟನೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುವುದು ಹಾಸ್ಯಾಸ್ಪದ’ ಎಂದು ಲೇವಡಿ ಮಾಡಿದರು.</p>.<p>‘ಮಹಿಳೆ ಮೇಲೆ ಯಾವುದೇ ರಾಷ್ಟ್ರೀಯ ಪಕ್ಷದ ಜನಪ್ರತಿನಿಧಿಗಳು ಅಗೌರವದಿಂದ ವರ್ತಿಸಿದಲ್ಲಿ ಪಕ್ಷಾತೀತವಾಗಿ ಮಹಿಳಾ ಸದಸ್ಯೆಯಾಗಿ ಧ್ವನಿ ಎತ್ತಿ ಹೋರಾಟ ನಡೆಸಿ ನ್ಯಾಯ ಕೊಡಿಸುವ ದಿಕ್ಕಿನಲ್ಲಿ ಶ್ರಮಿಸುವುದು ಖಚಿತ’ ಎಂದು ಪ್ರಶ್ಯೆಯೊಂದಕ್ಕೆ ತಿಳಿಸಿದರು.</p>.<p>‘ರಾಷ್ಟ್ರದಲ್ಲಿ ಕೋವಿಡ್ ಸೋಕಿನಿಂದ ಸಾಮಾನ್ಯ ಜನರು ವಿವಿಧ ಸಮಸ್ಯೆಗೆ ಸಿಲುಕಿದ್ದು ಈ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಮತ್ತು ಕೃಷಿಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಪ್ರಕಟಿಸಿ ರೈತನ ಸಂಕಷ್ಟಕ್ಕೆ ಸ್ಪಂದಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ಬಿಜೆಪಿ ಶಾಸಕ ಸಿದ್ದು ಸವದಿ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಗುರುವಾರ ಇಲ್ಲಿ ಆಗ್ರಹಿಸಿದರು.</p>.<p>‘ಪುರಸಭೆ ಅಧ್ಯಕ್ಷ–ಉಪಾಧ್ಯಕ್ಷ ಚುನಾವಣೆ ವೇಳೆ, ಪುರಸಭೆ ಸದಸ್ಯೆಯೊಂದಿಗಿನ ಅವರ ವರ್ತನೆಯಿಂದ ಮಹಿಳೆಯರ ರಾಜಕೀಯ ಸ್ವಾತಂತ್ರ್ಯ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಘಟನೆ ನಡೆದು, 54 ಗಂಟೆ ಕಳೆದಿದ್ದರೂ ಅವರ ವಿರುದ್ಧ ಪಕ್ಷವು ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ಕಿಡಿಕಾರಿದರು.</p>.<p>‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ‘ಕೋಮಾ’ಗೆ ಸರಿದಿದೆ ಎನ್ನಲು ಈ ಘಟನೆ ಜೀವಂತ ಉದಾಹರಣೆ. ಮಹಿಳೆ ಎಂಬ ಒಂದೇ ಕಾರಣಕ್ಕೆ ಸ್ಥಳೀಯ ಜನಪ್ರತಿನಿಧಿ ಎಂಬುದನ್ನು ಗಮನಕ್ಕೆ ತೆಗೆದುಕೊಳ್ಳದೆ ಶಾಸಕರು ಕೈ ಹಿಡಿದು ಎಳೆದಾಡಿರುವುದು ಸಮಂಜಸವೇ’ ಎಂದು ಪ್ರಶ್ನಿಸಿದರು.</p>.<p>‘ವಿರೋಧ ಪಕ್ಷದವರು ಎಲ್ಲದಕ್ಕೂ ಟೀಕೆ ಮಾಡುತ್ತಾರೆ ಎನ್ನುವ ಸಚಿವ ಸಿ.ಟಿ.ರವಿ ಈ ಘಟನೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುವುದು ಹಾಸ್ಯಾಸ್ಪದ’ ಎಂದು ಲೇವಡಿ ಮಾಡಿದರು.</p>.<p>‘ಮಹಿಳೆ ಮೇಲೆ ಯಾವುದೇ ರಾಷ್ಟ್ರೀಯ ಪಕ್ಷದ ಜನಪ್ರತಿನಿಧಿಗಳು ಅಗೌರವದಿಂದ ವರ್ತಿಸಿದಲ್ಲಿ ಪಕ್ಷಾತೀತವಾಗಿ ಮಹಿಳಾ ಸದಸ್ಯೆಯಾಗಿ ಧ್ವನಿ ಎತ್ತಿ ಹೋರಾಟ ನಡೆಸಿ ನ್ಯಾಯ ಕೊಡಿಸುವ ದಿಕ್ಕಿನಲ್ಲಿ ಶ್ರಮಿಸುವುದು ಖಚಿತ’ ಎಂದು ಪ್ರಶ್ಯೆಯೊಂದಕ್ಕೆ ತಿಳಿಸಿದರು.</p>.<p>‘ರಾಷ್ಟ್ರದಲ್ಲಿ ಕೋವಿಡ್ ಸೋಕಿನಿಂದ ಸಾಮಾನ್ಯ ಜನರು ವಿವಿಧ ಸಮಸ್ಯೆಗೆ ಸಿಲುಕಿದ್ದು ಈ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಮತ್ತು ಕೃಷಿಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಪ್ರಕಟಿಸಿ ರೈತನ ಸಂಕಷ್ಟಕ್ಕೆ ಸ್ಪಂದಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>