ಮೈಸೂರು: ಇಲ್ಲಿನ ನಿರಂಜನಮಠ ಉಳಿಸಬೇಕು ಎಂದು ಆಗ್ರಹಿಸಿ ನಿರಂಜನ ಮಠ ಸಂರಕ್ಷಣಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪಾದಯಾತ್ರೆ ನಡೆಸಿದರು.
ನಂಜನಗೂಡು ತಾಲ್ಲೂಕಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಕರ್ತರು ಮೈಸೂರಿನವರೆಗೂ ಪಾದಯಾತ್ರೆ ನಡೆಸಿ ಬೆಂಬಲ ನೀಡಿದರು. ನಂತರ ಮಠದ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಿದರು.
ಹೊಸಮಠದ ಚಿದಾನಂದ ಸ್ವಾಮೀಜಿ ಚಿದಾನಂದ ಸ್ವಾಮೀಜಿ, ಗಾವಡಗೆರೆ ಮಠದ ನಟರಾಜಸ್ವಾಮೀಜಿ, ಜಪದಕಟ್ಟೆ ಮಠದ ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಭಾಗಿಯಾದರು.