‘ಸರ್ಕಾರ ನಮ್ಮ ಹೋರಾಟವನ್ನು ಲಘುವಾಗಿ ತೆಗೆದುಕೊಳ್ಳುವುದು ಬೇಡ. ‘ರಂಗಾಯಣ ಉಳಿಸಿ’ ವಿಷಯದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಸಲು ತೀರ್ಮಾನಿಸಿದ್ದೇವೆ. ಬೆಂಗಳೂರು, ಧಾರವಾಡ, ಶಿವಮೊಗ್ಗ ಮತ್ತು ದಾವಣಗೆರೆಯಿಂದಲೂ ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಇಡೀ ರಾಜ್ಯಕ್ಕೆ ತಿಳಿಯಪಡಿಸುತ್ತೇವೆ’ ಎಂದರು.