ಕೊಡವ ಸಮಾಜ, ಮೈಸೂರು ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಡ್ಡಂಡ ಕಾರ್ಯಪ್ಪ ಪರ ಪ್ರತಿಭಟನೆ ನಡೆಸಿದರು. ಪೃಗತಿಪರರು ಎಂದು ಕರೆಸಿಕೊಳ್ಳುವ ಕೆಲವರು ಕಾರ್ಯಪ್ಪ ಅವರಿಗೆ ತೊಂದರೆ ಕೊಡುತ್ತಿದ್ದಾರೆ. ರಂಗಾಯಣದ ಆವರಣದಲ್ಲಿ ನಿತ್ಯ ಪ್ರತಿಭಟನೆ ನಡೆಸುವ ಮೂಲಕ ಕಲಾ ಚಟುವಟಿಕೆಗಳಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.