ಪಾಲಿಕೆ ಆಯುಕ್ತರನ್ನು ಕರೆಸಿ ಸಭೆ ನಡೆಸಿದ್ದು, ನಗರಕ್ಕೆ ನೀರು ಬಿಡಬೇಕೆಂದರೆ ಕೆರೆ ಹೊಳೆತ್ತಿಸಿ ಕೆರೆ ಏರಿ ಅಭಿವೃದ್ಧಿ ಪಡಿಸುವುದರ ಜೊತೆಗೆ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂದು ಸೂಚನೆ ನೀಡಿದ್ದೇನೆ. ಇದಕ್ಕೆ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ, ರೈತರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.