ಮೈಸೂರು: ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ನಡೆದಿರುವ ಪರಿಶಿಷ್ಟ ಜಾತಿಯ ವಿಧವಾ ಪುನರ್ ವಿವಾಹದ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಬ್ಬ ಅಧಿಕಾರಿಯನ್ನು ಅಮಾನತು ಮಾಡಲಾಗಿದ್ದು, ಮಧ್ಯವರ್ತಿ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್.ಎಸ್.ಬಿಂದ್ಯಾ ಶುಕ್ರವಾರ ತಿಳಿಸಿದರು.