ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರರಾದ ಮಂಜುಳಾ ಮಾನಸ, ‘ಸಾರ್ವಜನಿಕರು ಮತ್ತು ಚೀನಾ ಕಂಪನಿಗಳಿಂದ ಪಡೆದಿರುವ ಒಂದು ಲಕ್ಷ ಕೋಟಿ ರೂಪಾಯಿಯಷ್ಟು ದೇಣಿಗೆಯ ವಿವರಗಳನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದರು.
ವಿವೇಕಾನಂದ ಫೌಂಡೇಷನ್, ಇಂಡಿಯಾ ಫೌಂಡೇಷನ್ ಬಗ್ಗೆಯೂ ತನಿಖೆಗೆ ಆದೇಶಿಸುವಿರಾ, ಓವರ್ ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ ಎಂಬ ಸಂಸ್ಥೆಗೆ ಯಾರು ಎಷ್ಟು ಹಣ ನೀಡಿದ್ದಾರೆ, ಚೀನಾ ದೇಶದಿಂದ ಎಷ್ಟು ದೇಣಿಗೆ ಬಂದಿದೆ ಮತ್ತು ಏತಕ್ಕಾಗಿ ಉಪಯೋಗಿಸಲಾಗಿದೆ ಎಂಬುದನ್ನು ಬಹಿರಂಗ ಮಾಡುತ್ತೀರಾ ಎಂದು ಪ್ರಶ್ನಿಸಿದರು.