‘ಉತ್ತರಾಖಂಡದ ಕೇದಾರನಾಥದಲ್ಲಿ ಈಚೆಗೆ ಅನಾವರಣಗೊಳಿಸಿದ, ನಾನು ಕೆತ್ತಿದ್ದ ಆದಿ ಶಂಕರಾಚಾರ್ಯರ ಪ್ರತಿಮೆ ವಿಚಾರ ಪ್ರಸ್ತಾಪಿಸಿ ಮೆಚ್ಚುಗೆ ಸೂಚಿಸಿದರು. ಐದು ತಲೆಮಾರುಗಳಿಂದ ನಮ್ಮ ಕುಟುಂಬವು ಶಿಲ್ಪಗಳ ಕೆತ್ತನೆ ಕೆಲಸದಲ್ಲಿ ತೊಡಗಿದ್ದು, ಪ್ರಧಾನಿ ಮೆಚ್ಚುಗೆಯಿಂದ ಈ ಕಾರ್ಯಕ್ಕೆ ಮನ್ನಣೆ ಸಿಕ್ಕಿದೆ. ತುಂಬಾ ಸಂತೋಷ ಉಂಟು ಮಾಡಿದೆ. ಮೋದಿ ಅವರನ್ನು ಭೇಟಿ ಮಾಡಿಸಿದ ಸಂಸದ ಪ್ರತಾಪಸಿಂಹ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಅರುಣ್ ‘ಪ್ರಜಾವಾಣಿ’ಗೆ ತಿಳಿಸಿದರು.