<p><strong>ಮೈಸೂರು:</strong> ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 2 ಅಡಿ ಎತ್ತರದ ಏಕಶಿಲಾ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು.</p>.<p>‘ಉತ್ತರಾಖಂಡದ ಕೇದಾರನಾಥದಲ್ಲಿ ಈಚೆಗೆ ಅನಾವರಣಗೊಳಿಸಿದ, ನಾನು ಕೆತ್ತಿದ್ದ ಆದಿ ಶಂಕರಾಚಾರ್ಯರ ಪ್ರತಿಮೆ ವಿಚಾರ ಪ್ರಸ್ತಾಪಿಸಿ ಮೆಚ್ಚುಗೆ ಸೂಚಿಸಿದರು. ಐದು ತಲೆಮಾರುಗಳಿಂದ ನಮ್ಮ ಕುಟುಂಬವು ಶಿಲ್ಪಗಳ ಕೆತ್ತನೆ ಕೆಲಸದಲ್ಲಿ ತೊಡಗಿದ್ದು, ಪ್ರಧಾನಿ ಮೆಚ್ಚುಗೆಯಿಂದ ಈ ಕಾರ್ಯಕ್ಕೆ ಮನ್ನಣೆ ಸಿಕ್ಕಿದೆ. ತುಂಬಾ ಸಂತೋಷ ಉಂಟು ಮಾಡಿದೆ. ಮೋದಿ ಅವರನ್ನು ಭೇಟಿ ಮಾಡಿಸಿದ ಸಂಸದ ಪ್ರತಾಪಸಿಂಹ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಅರುಣ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಭೇಟಿ ವಿಚಾರವನ್ನು ಮೋದಿ ಅವರು ಟ್ವೀಟರ್ನಲ್ಲಿ ಹಂಚಿಕೊಂಡಿದ್ದು, ‘ಅರುಣ್ ಯೋಗಿರಾಜ್ ಅವರನ್ನು ಭೇಟಿ ಮಾಡಿದ್ದು ಖುಷಿ ನೀಡಿದೆ. ನೇತಾಜಿ ಬೋಸ್ ವಿಗ್ರಹವನ್ನು ನೀಡಿದ್ದಕ್ಕೆ ಧನ್ಯವಾದ’ ಎಂದಿದ್ದಾರೆ.</p>.<p>ಕಶ್ಯಪ ಶಿಲ್ಪಕಲಾ ನಿಕೇತನದ ಅರುಣ್, 14 ವರ್ಷಗಳಿಂದ ಶಿಲ್ಪ ಕೆತ್ತನೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಶಿಲ್ಪ ಕಲಾಕೃತಿಯ 5ನೇ ತಲೆಮಾರಿನವರು. ಓದಿದ್ದು ಎಂಬಿಎ. ವಿದ್ಯಾಭಾಸಕ್ಕೆ ತಕ್ಕಂತೆ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸವೂ ಸಿಕ್ಕಿತ್ತು. ಆದರೆ, ‘ಕಲ್ಲಿ’ನ ಸೆಳೆತಕ್ಕೆ ಮಾರು ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 2 ಅಡಿ ಎತ್ತರದ ಏಕಶಿಲಾ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು.</p>.<p>‘ಉತ್ತರಾಖಂಡದ ಕೇದಾರನಾಥದಲ್ಲಿ ಈಚೆಗೆ ಅನಾವರಣಗೊಳಿಸಿದ, ನಾನು ಕೆತ್ತಿದ್ದ ಆದಿ ಶಂಕರಾಚಾರ್ಯರ ಪ್ರತಿಮೆ ವಿಚಾರ ಪ್ರಸ್ತಾಪಿಸಿ ಮೆಚ್ಚುಗೆ ಸೂಚಿಸಿದರು. ಐದು ತಲೆಮಾರುಗಳಿಂದ ನಮ್ಮ ಕುಟುಂಬವು ಶಿಲ್ಪಗಳ ಕೆತ್ತನೆ ಕೆಲಸದಲ್ಲಿ ತೊಡಗಿದ್ದು, ಪ್ರಧಾನಿ ಮೆಚ್ಚುಗೆಯಿಂದ ಈ ಕಾರ್ಯಕ್ಕೆ ಮನ್ನಣೆ ಸಿಕ್ಕಿದೆ. ತುಂಬಾ ಸಂತೋಷ ಉಂಟು ಮಾಡಿದೆ. ಮೋದಿ ಅವರನ್ನು ಭೇಟಿ ಮಾಡಿಸಿದ ಸಂಸದ ಪ್ರತಾಪಸಿಂಹ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಅರುಣ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಭೇಟಿ ವಿಚಾರವನ್ನು ಮೋದಿ ಅವರು ಟ್ವೀಟರ್ನಲ್ಲಿ ಹಂಚಿಕೊಂಡಿದ್ದು, ‘ಅರುಣ್ ಯೋಗಿರಾಜ್ ಅವರನ್ನು ಭೇಟಿ ಮಾಡಿದ್ದು ಖುಷಿ ನೀಡಿದೆ. ನೇತಾಜಿ ಬೋಸ್ ವಿಗ್ರಹವನ್ನು ನೀಡಿದ್ದಕ್ಕೆ ಧನ್ಯವಾದ’ ಎಂದಿದ್ದಾರೆ.</p>.<p>ಕಶ್ಯಪ ಶಿಲ್ಪಕಲಾ ನಿಕೇತನದ ಅರುಣ್, 14 ವರ್ಷಗಳಿಂದ ಶಿಲ್ಪ ಕೆತ್ತನೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಶಿಲ್ಪ ಕಲಾಕೃತಿಯ 5ನೇ ತಲೆಮಾರಿನವರು. ಓದಿದ್ದು ಎಂಬಿಎ. ವಿದ್ಯಾಭಾಸಕ್ಕೆ ತಕ್ಕಂತೆ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸವೂ ಸಿಕ್ಕಿತ್ತು. ಆದರೆ, ‘ಕಲ್ಲಿ’ನ ಸೆಳೆತಕ್ಕೆ ಮಾರು ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>