ಮೈಸೂರು, ಗೋಣಿಕೊಪ್ಪಲು, ವಿರಾಜಪೇಟೆ, ಕಣ್ಣೂರು, ತಲಚೇರಿಗೆ ತೆರಳುವ ಬಸ್ಗಳು ತಿತಿಮತಿ ಮಾರ್ಗವಾಗಿ ಚಲಿಸಬೇಕಿತ್ತು. ಆದರೆ ತಿತಿಮತಿ ಬಳಿ ನೂತನವಾಗಿ ನಿರ್ಮಿಸುತ್ತಿರುವ ಸೇತುವೆ ಕುಸಿದು ಬಿದ್ದ ಪರಿಣಾಮ ಗುರುವಾರ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದೀಗ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಪಿರಿಯಾಪಟ್ಟಣ, ಮಾಲ್ದಾರೆ, ಸಿದ್ದಾಪುರ ಅಮ್ಮತ್ತಿ ಮಾರ್ಗದಲ್ಲಿ ಚಲಿಸುತ್ತಿರುವುದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲಿನ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ.