<p><strong>ಮೈಸೂರು: </strong>ನಗರದಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸರಣಿ ಪ್ರತಿಭಟನೆಗಳು ನಡೆದವು.</p>.<p>ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್, ರಾಜ್ಯದ ವಿವಿಧ ಭಾಗಗಳಲ್ಲಿ ಏಕಕಾಲಕ್ಕೆ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಮೈಸೂರಿನಲ್ಲಿ ನಡೆದ ಜಾಥಾಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಭವನದ ಮುಂಭಾಗ ಚಾಲನೆ ನೀಡಿದರು.</p>.<p>ಸಿದ್ದರಾಮಯ್ಯ ಸೈಕಲ್ ತುಳಿಯಲು ಮುಂದಾದರೂ, ನೂರಾರು ಅಭಿಮಾನಿ ಗಳು ಕಾರ್ಯಕರ್ತರು ನೂಕಾಟ, ತಳ್ಳಾಟ ನಡೆಯಿತು. ನಂತರ ಅವರು ಸೈಕಲ್ನಿಂದ ಇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸೇರಿದಂತೆ ಮುಖಂಡರು ಪಾಲ್ಗೊಂಡರು.</p>.<p>ಕಾಂಗ್ರೆಸ್ ಭವನದಿಂದ ಆರಂಭ ವಾದ ಜಾಥಾ ಬಾಬು ಜಗಜೀವನ್ ರಾಂ ಸರ್ಕಲ್ - ಇರ್ವಿನ್ ರಸ್ತೆ- ಅಶೋಕ ರಸ್ತೆ ಮೂಲಕ ಸಾಗಿ ಗಾಂಧಿವೃತ್ತದಲ್ಲಿ ಕೊನೆಗೊಂಡಿತು.</p>.<p><strong>ಎಸ್ಯುಸಿಐ ಪ್ರತಿಭಟನೆ:</strong> ಬೆಲೆ ಏರಿಕೆ ವಿರುದ್ಧ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಾರ್ಯ ಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಅಡುಗೆ ಅನಿಲ, ಅಡುಗೆ ಎಣ್ಣೆ, ಬೇಳೆಕಾಳುಗಳ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರಧಾನಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಸಂಘ ಟನೆಯ ಜಿಲ್ಲಾ ಕಾರ್ಯದರ್ಶಿ ಬಿ.ರವಿ, ’ಅಡುಗೆ ಅನಿಲದ ಸಬ್ಸಿಡಿ ರದ್ಧತಿಯನ್ನು ವಾಪಸ್ ಪಡೆಯಬೇಕು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ಮೂಲಕ ಬೆಲೆಗಳನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಚಂದ್ರಶೇಖರ ಮೇಟಿ, ಸಂಧ್ಯಾ, ಸೀಮಾ, ಹರೀಶ್ ಇದ್ದರು.</p>.<p><strong>ಎನ್ಟಿಎಂ ಶಾಲೆ; ಪ್ರತಿಭಟನೆ ಮುಂದುವರಿಕೆ:</strong> ಎನ್ಟಿಎಂ ಶಾಲೆ ಉಳಿಸಿ ಎಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯ ಹತ್ತನೇ ದಿನವಾದ ಬುಧವಾರ ಭಾರತೀಯ ವಿದ್ಯಾರ್ಥಿ ಸಂಘ ದ ಕಾರ್ಯಕರ್ತರು ಎನ್ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿಯ ಹೋರಾಟಗಾರರೊಂದಿಗೆ ಕೈಜೋಡಿಸಿದರು.</p>.<p>ಶಾಲೆಯ ಮುಂಭಾಗ ಭಿತ್ತಿಪತ್ರಗಳನ್ನಿಡಿದು ಕುಳಿತ ಅವರು, ಶಾಲೆ ಉಳಿಯಲೇಬೇಕು ಎಂದು ಒತ್ತಾಯಸಿ ಘೋಷಣೆ ಕೂಗಿದರು. ನಂತರ, ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.</p>.<p>ಹೋರಾಟಗಾರರಾದ ಪ.ಮಲ್ಲೇಶ್, ಸ.ರ.ಸುದರ್ಶನ, ಮಾಜಿ ಮೇಯರ್ ಪುರುಷೋತ್ತಮ್, ಶಿವಕುಮಾರ್, ಸೋಸಲೆ ಸಿದ್ಧರಾಜು, ಸೋಸಲೆ ಗಂಗಾಧರ, ಮಹದೇವು, ಜಯಶಂಕರ ಮೇಸ್ತ್ರಿ, ಶ್ರೀನಿವಾಸ, ನಾಗೇಂದ್ರ, ಸಾಗರ, ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಇದ್ದರು.</p>.<p><strong>ಲಸಿಕೆ ನೀಡುವವರೆಗೂ ಪರೀಕ್ಷೆ ಬೇಡ: </strong>ವಿದ್ಯಾರ್ಥಿಗಳಿಗೆ ಎರಡು ಡೋಸೆಜ್ ಕೋವಿಡ್ ಲಸಿಕೆ ನೀಡುವವರೆಗೂ ‘ಆಫ್ಲೈನ್’ ಪರೀಕ್ಷೆ ಮಾಡಬಾರದು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಡಿಪ್ಲೊಮಾ, ಎಂಜಿನಿಯರಿಂಗ್, ಪದವಿ, ಸ್ನಾತಕೋತ್ತರ, ಫಾರ್ಮಸಿ ವಿಭಾಗದ ಕಳೆದ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ಒಂದು ತಿಂಗಳಿನಲ್ಲಿ 2 ಸೆಮಿಸ್ಟರ್ ಪರೀಕ್ಷೆಯನ್ನು ಹೇರಬೇಡಿ ಎಂದು ಆಗ್ರಹಿಸಿದ ಅವರು, ಒಂದೇ ಪರೀಕ್ಷೆ ನಡೆಸಬೇಕು ಎಂದು ಮನವಿ ಮಾಡಿದರು.</p>.<p>ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ಆಸಿಯಾಬೇಗಂ ಸೇರಿದಂತೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಗರದಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸರಣಿ ಪ್ರತಿಭಟನೆಗಳು ನಡೆದವು.</p>.<p>ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್, ರಾಜ್ಯದ ವಿವಿಧ ಭಾಗಗಳಲ್ಲಿ ಏಕಕಾಲಕ್ಕೆ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಮೈಸೂರಿನಲ್ಲಿ ನಡೆದ ಜಾಥಾಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಭವನದ ಮುಂಭಾಗ ಚಾಲನೆ ನೀಡಿದರು.</p>.<p>ಸಿದ್ದರಾಮಯ್ಯ ಸೈಕಲ್ ತುಳಿಯಲು ಮುಂದಾದರೂ, ನೂರಾರು ಅಭಿಮಾನಿ ಗಳು ಕಾರ್ಯಕರ್ತರು ನೂಕಾಟ, ತಳ್ಳಾಟ ನಡೆಯಿತು. ನಂತರ ಅವರು ಸೈಕಲ್ನಿಂದ ಇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸೇರಿದಂತೆ ಮುಖಂಡರು ಪಾಲ್ಗೊಂಡರು.</p>.<p>ಕಾಂಗ್ರೆಸ್ ಭವನದಿಂದ ಆರಂಭ ವಾದ ಜಾಥಾ ಬಾಬು ಜಗಜೀವನ್ ರಾಂ ಸರ್ಕಲ್ - ಇರ್ವಿನ್ ರಸ್ತೆ- ಅಶೋಕ ರಸ್ತೆ ಮೂಲಕ ಸಾಗಿ ಗಾಂಧಿವೃತ್ತದಲ್ಲಿ ಕೊನೆಗೊಂಡಿತು.</p>.<p><strong>ಎಸ್ಯುಸಿಐ ಪ್ರತಿಭಟನೆ:</strong> ಬೆಲೆ ಏರಿಕೆ ವಿರುದ್ಧ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಾರ್ಯ ಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಅಡುಗೆ ಅನಿಲ, ಅಡುಗೆ ಎಣ್ಣೆ, ಬೇಳೆಕಾಳುಗಳ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರಧಾನಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಸಂಘ ಟನೆಯ ಜಿಲ್ಲಾ ಕಾರ್ಯದರ್ಶಿ ಬಿ.ರವಿ, ’ಅಡುಗೆ ಅನಿಲದ ಸಬ್ಸಿಡಿ ರದ್ಧತಿಯನ್ನು ವಾಪಸ್ ಪಡೆಯಬೇಕು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ಮೂಲಕ ಬೆಲೆಗಳನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಚಂದ್ರಶೇಖರ ಮೇಟಿ, ಸಂಧ್ಯಾ, ಸೀಮಾ, ಹರೀಶ್ ಇದ್ದರು.</p>.<p><strong>ಎನ್ಟಿಎಂ ಶಾಲೆ; ಪ್ರತಿಭಟನೆ ಮುಂದುವರಿಕೆ:</strong> ಎನ್ಟಿಎಂ ಶಾಲೆ ಉಳಿಸಿ ಎಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯ ಹತ್ತನೇ ದಿನವಾದ ಬುಧವಾರ ಭಾರತೀಯ ವಿದ್ಯಾರ್ಥಿ ಸಂಘ ದ ಕಾರ್ಯಕರ್ತರು ಎನ್ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿಯ ಹೋರಾಟಗಾರರೊಂದಿಗೆ ಕೈಜೋಡಿಸಿದರು.</p>.<p>ಶಾಲೆಯ ಮುಂಭಾಗ ಭಿತ್ತಿಪತ್ರಗಳನ್ನಿಡಿದು ಕುಳಿತ ಅವರು, ಶಾಲೆ ಉಳಿಯಲೇಬೇಕು ಎಂದು ಒತ್ತಾಯಸಿ ಘೋಷಣೆ ಕೂಗಿದರು. ನಂತರ, ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.</p>.<p>ಹೋರಾಟಗಾರರಾದ ಪ.ಮಲ್ಲೇಶ್, ಸ.ರ.ಸುದರ್ಶನ, ಮಾಜಿ ಮೇಯರ್ ಪುರುಷೋತ್ತಮ್, ಶಿವಕುಮಾರ್, ಸೋಸಲೆ ಸಿದ್ಧರಾಜು, ಸೋಸಲೆ ಗಂಗಾಧರ, ಮಹದೇವು, ಜಯಶಂಕರ ಮೇಸ್ತ್ರಿ, ಶ್ರೀನಿವಾಸ, ನಾಗೇಂದ್ರ, ಸಾಗರ, ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಇದ್ದರು.</p>.<p><strong>ಲಸಿಕೆ ನೀಡುವವರೆಗೂ ಪರೀಕ್ಷೆ ಬೇಡ: </strong>ವಿದ್ಯಾರ್ಥಿಗಳಿಗೆ ಎರಡು ಡೋಸೆಜ್ ಕೋವಿಡ್ ಲಸಿಕೆ ನೀಡುವವರೆಗೂ ‘ಆಫ್ಲೈನ್’ ಪರೀಕ್ಷೆ ಮಾಡಬಾರದು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಡಿಪ್ಲೊಮಾ, ಎಂಜಿನಿಯರಿಂಗ್, ಪದವಿ, ಸ್ನಾತಕೋತ್ತರ, ಫಾರ್ಮಸಿ ವಿಭಾಗದ ಕಳೆದ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ಒಂದು ತಿಂಗಳಿನಲ್ಲಿ 2 ಸೆಮಿಸ್ಟರ್ ಪರೀಕ್ಷೆಯನ್ನು ಹೇರಬೇಡಿ ಎಂದು ಆಗ್ರಹಿಸಿದ ಅವರು, ಒಂದೇ ಪರೀಕ್ಷೆ ನಡೆಸಬೇಕು ಎಂದು ಮನವಿ ಮಾಡಿದರು.</p>.<p>ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ಆಸಿಯಾಬೇಗಂ ಸೇರಿದಂತೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>