<p><strong>ಮೈಸೂರು:</strong> ತನ್ನಲ್ಲಿ ಟ್ಯೂಷನ್ಗೆ ಬರುತ್ತಿದ್ದ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಶಾಲೆಯೊಂದರ ಮುಖ್ಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವಿದ್ಯಾರ್ಥಿನಿಯು ಈಚೆಗೆ ತನ್ನ ಸಂಬಂಧಿಕರೊಬ್ಬರ ಬಳಿ ತಾನು 2 ವರ್ಷದ ಹಿಂದೆ ಅನುಭವಿಸಿದ ಲೈಂಗಿಕ ಕಿರುಕುಳದ ಘಟನೆಯನ್ನು ಆಕಸ್ಮಿಕವಾಗಿ ಹೇಳಿದ್ದಾಳೆ. ಇದೇ ರೀತಿಯ ಕಿರುಕುಳವನ್ನು ಅನೇಕ ವಿದ್ಯಾರ್ಥಿನಿಗೂ ಶಿಕ್ಷಕ ನೀಡಿದ್ದ ಎಂದು ತಿಳಿಸಿದ್ದಾಳೆ. ತಕ್ಷಣವೇ ಸಂಬಂಧಿಕರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಫೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.</p>.<p><strong>ವ್ಯಕ್ತಿ ಆತ್ಮಹತ್ಯೆ</strong></p>.<p>ಮೈಸೂರು: ಇಲ್ಲಿನ ಕೂರ್ಗಳ್ಳಿ ನಿವಾಸಿ ಕಿರಣ್ (30) ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮದ್ಯವ್ಯಸನಿಯಾಗಿದ್ದ ಇವರು ಕುಟುಂಬದ ಸದಸ್ಯರೊಂದಿಗೆ ಜಗಳವಾಡುತ್ತಿದ್ದರು. ಖಿನ್ನತೆಗೆ ಜಾರಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಪ್ರಕಾಶ್ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ವಿಜಯನಗರ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ಬೈಕಿನಿಂದ ಬಿದ್ದು ಯುವಕ ಸಾವು</strong></p>.<p>ಮೈಸೂರು: ತಾಲ್ಲೂಕಿನ ಹಲಗಯ್ಯನಹುಂಡಿ ನಿವಾಸಿ ಮಾಣಿಕ್ಯರಾಜು (18) ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಇವರು ತಮ್ಮ ಗ್ರಾಮದಲ್ಲೇ ಬೈಕ್ ಚಾಲನೆ ಮಾಡುತ್ತಿರುವಾಗ ಅಡ್ಡವಾಗಿ ಸಿಕ್ಕಿದ ಕಲ್ಲೊಂದರ ಮೇಲೆ ಬೈಕ್ನ್ನು ಹತ್ತಿಸಿದ್ದಾರೆ. ಇದರಿಂದ ಆಯತಪ್ಪಿದ ಇವರು ಕೆಳಗೆ ಬಿದ್ದು, ಕಿವಿಯ ಸಮೀಪ ಪೆಟ್ಟಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ತನ್ನಲ್ಲಿ ಟ್ಯೂಷನ್ಗೆ ಬರುತ್ತಿದ್ದ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಶಾಲೆಯೊಂದರ ಮುಖ್ಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವಿದ್ಯಾರ್ಥಿನಿಯು ಈಚೆಗೆ ತನ್ನ ಸಂಬಂಧಿಕರೊಬ್ಬರ ಬಳಿ ತಾನು 2 ವರ್ಷದ ಹಿಂದೆ ಅನುಭವಿಸಿದ ಲೈಂಗಿಕ ಕಿರುಕುಳದ ಘಟನೆಯನ್ನು ಆಕಸ್ಮಿಕವಾಗಿ ಹೇಳಿದ್ದಾಳೆ. ಇದೇ ರೀತಿಯ ಕಿರುಕುಳವನ್ನು ಅನೇಕ ವಿದ್ಯಾರ್ಥಿನಿಗೂ ಶಿಕ್ಷಕ ನೀಡಿದ್ದ ಎಂದು ತಿಳಿಸಿದ್ದಾಳೆ. ತಕ್ಷಣವೇ ಸಂಬಂಧಿಕರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಫೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.</p>.<p><strong>ವ್ಯಕ್ತಿ ಆತ್ಮಹತ್ಯೆ</strong></p>.<p>ಮೈಸೂರು: ಇಲ್ಲಿನ ಕೂರ್ಗಳ್ಳಿ ನಿವಾಸಿ ಕಿರಣ್ (30) ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮದ್ಯವ್ಯಸನಿಯಾಗಿದ್ದ ಇವರು ಕುಟುಂಬದ ಸದಸ್ಯರೊಂದಿಗೆ ಜಗಳವಾಡುತ್ತಿದ್ದರು. ಖಿನ್ನತೆಗೆ ಜಾರಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಪ್ರಕಾಶ್ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ವಿಜಯನಗರ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ಬೈಕಿನಿಂದ ಬಿದ್ದು ಯುವಕ ಸಾವು</strong></p>.<p>ಮೈಸೂರು: ತಾಲ್ಲೂಕಿನ ಹಲಗಯ್ಯನಹುಂಡಿ ನಿವಾಸಿ ಮಾಣಿಕ್ಯರಾಜು (18) ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಇವರು ತಮ್ಮ ಗ್ರಾಮದಲ್ಲೇ ಬೈಕ್ ಚಾಲನೆ ಮಾಡುತ್ತಿರುವಾಗ ಅಡ್ಡವಾಗಿ ಸಿಕ್ಕಿದ ಕಲ್ಲೊಂದರ ಮೇಲೆ ಬೈಕ್ನ್ನು ಹತ್ತಿಸಿದ್ದಾರೆ. ಇದರಿಂದ ಆಯತಪ್ಪಿದ ಇವರು ಕೆಳಗೆ ಬಿದ್ದು, ಕಿವಿಯ ಸಮೀಪ ಪೆಟ್ಟಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>