ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿದ ನಂತರ ನಗರದ ಪ್ರಮುಖ ಬಡಾವಣೆಗಳಲ್ಲಿ ಜನರಿಗೆ ಬಯಲು ಬಹಿರ್ದೆಸೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ತಿಳಿ ಹೇಳಲು ಮೆರವಣಿಗೆ ನಡೆಸಿದರು. ಸಾಂಕ್ರಾಮಿಕ ರೋಗ, ಅತಿಸಾರದ ಬಗ್ಗೆ ತಿಳಿವಳಿಕೆ ನೀಡಿ, ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿದರು. ನೀರು ಮಲಿನವಾದರೆ ಸೊಳ್ಳೆಗಳು ಹೆಚ್ಚಿ ಮಲೇರಿಯಾ, ಚಿಕೂನ್ ಗುನ್ಯದಂತಹ ರೋಗಗಳು ಹರಡುವ ಬಗ್ಗೆ ಜನರಿಗೆ ಅರಿವು ಮೂಡಿಸಿದರು.