ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ‘ಹಿರಿಯರಾದ ಶಿವಶಂಕರಪ್ಪ ಯಾವುದೋ ಒಂದು ಸಿದ್ಧಾಂತದ ಮೇಲೆ ಹೇಳಿಕೆ ಕೊಟ್ಟಿದ್ದರೆ ನಾನು ಪ್ರತಿಕ್ರಿಯಿಸುತ್ತಿರಲಿಲ್ಲ. ಹಿರಿಯರು ಎಂದು ಸುಮ್ಮನಿರುತ್ತಿದ್ದೆ. ಆದರೆ ವೈಯಕ್ತಿಕವಾಗಿ ಟೀಕೆ ಮಾಡಿದ್ದರಿಂದ ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಆ ಕುರಿತ ಚರ್ಚೆಯನ್ನು ಇಲ್ಲಿಗೆ ಕೊನೆಗೊಳಿಸುತ್ತೇನೆ’ ಎಂದರು.