ನಂತರ ಮಾತನಾಡಿ, ‘ದೇಶದ ಕಾರ್ಮಿಕ ವರ್ಗ ನಿಜವಾದ ವಿಮುಕ್ತಿ ಪಡೆಯಬೇಕು ಎಂಬ ಉದ್ದೇಶದಿಂದ ಶಿವದಾಸ್ 1948ರಲ್ಲಿ ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯೂನಿಸ್ಟ್ ಪಕ್ಷವನ್ನು ಸ್ಥಾಪಿಸಿದರು. 1947ರಲ್ಲಿ ನಮಗೆ ಸಿಕ್ಕಿದ್ದು ರಾಜಕೀಯ ಸ್ವಾತಂತ್ರ್ಯವಷ್ಟೆ. ಇಂದಿನ ಸಾಮಾಜಿಕ ಸಮಸ್ಯೆಗಳಾದ ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ವ್ಯಾಪಾರೀಕರಣ, ಹೆಣ್ಣು ಮಕ್ಕಳ ಮೇಲೆ ಹೆಚ್ಚಾಗುತ್ತಿರುವ ಅಪರಾಧಗಳು, ಭ್ರಷ್ಟಾಚಾರ, ಬೆಲೆ ಏರಿಕೆ ಮೊದಲಾದವುಗಳನ್ನು ಆಮೂಲಾಗ್ರವಾಗಿ ಹೋಗಲಾಡಿಸಲು ಮತ್ತು ಸಮಾಜವಾದಿ ಸಮಾಜಕ್ಕಾಗಿ ಘೋಷ್ ಚಿಂತನೆಗಳು ಪ್ರಸ್ತುತವಾಗಿವೆ’ ಎಂದರು.