ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವರಾಜ ಬೊಮ್ಮಾಯಿ 'ಜನ ಸಾಮಾನ್ಯ'ರ ಸಿ.ಎಂ: ಶಿವರಾಜ್‌ಕುಮಾರ್‌

Last Updated 7 ಏಪ್ರಿಲ್ 2022, 13:18 IST
ಅಕ್ಷರ ಗಾತ್ರ

ಮೈಸೂರು: 'ಬಸವರಾಜ ಬೊಮ್ಮಾಯಿ ಅವರಂಥ ಮುಖ್ಯಮಂತ್ರಿಯನ್ನು ನಾನು ಕಂಡಿಲ್ಲ. ಇವರೊಬ್ಬ ಜನ ಸಾಮಾನ್ಯರ ಮುಖ್ಯಮಂತ್ರಿ' ಎಂದು ನಟ ಶಿವರಾಜ್‌ಕುಮಾರ್‌ ಬಣ್ಣಿಸಿದರು.

ಶಕ್ತಿಧಾಮದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಬೊಮ್ಮಾಯಿ ತುಂಬಾ ಸರಳ. ನಮ್ಮ ಕುಟುಂಬದ ಮೇಲೆ ಅಪಾರ ಗೌರವ ಇಟ್ಟಿದ್ದಾರೆ. ಅಪ್ಪು ಅಂತ್ಯಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಿಕೊಟ್ಟರು. ಭಾವನೆಗಳನ್ನು ನಾಟಕದ ಮೂಲಕ ತೋರಿಸಲು ಸಾಧ್ಯವಿಲ್ಲ. ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂದೆಯೂ ಅವರ ಸಹಾಯ ಇರಲಿದೆ' ಎಂದು ಭಾವಿಸಿದ್ದೇನೆ' ಎಂದರು.

'ನನಗೆ ದುಃಖ ಆದಾಗಲೆಲ್ಲಾ ಶಕ್ತಿಧಾಮಕ್ಕೆ ಬರುತ್ತೇನೆ. ಅಪ್ಪುನ ಈ ಮಕ್ಕಳಲ್ಲಿ ನೋಡುತ್ತಿದ್ದೇನೆ. ಇಲ್ಲಿನ ಮಕ್ಕಳು ನನ್ನನ್ನು ಅಣ್ಣ ಎನ್ನುತ್ತಾರೆ, ಕೆಲವರು ಅಪ್ಪ ಎನ್ನುತ್ತಾರೆ. ಉಸಿರು ಇರೋವರೆಗೆ ಶಕ್ತಿಧಾಮ ಬಿಡಲ್ಲ. ಅಪ್ಪಾಜಿ ಕಟ್ಟಿದ ಶಕ್ತಿಧಾಮಕ್ಕೆ ಯುಕ್ತಿಯಾಗಿ ನಿಲ್ಲುತ್ತೇನೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT