<p><strong>ಮೈಸೂರು:</strong> ನಂಜನಗೂಡು ತಾಲ್ಲೂಕಿನ ಸುತ್ತೂರಿನ ವೀರಸಿಂಹಾಸನ ಮಠದ ಸ್ಥಾಪಾನಾಚಾರ್ಯ ಶಿವರಾತ್ರೀಶ್ವರ ಅವರ 1060ನೇ ಜಯಂತಿ ಮಹೋತ್ಸವ ಮಂಗಳವಾರ ಸುತ್ತೂರಿನಲ್ಲಿ ನೆರವೇರಿತು.</p>.<p>ಸುತ್ತೂರಿನ ಮೂಲಮಠದ ಆವರಣದಲ್ಲಿ ಸಚಿವ ಸೋಮಣ್ಣ ಶಿವರಾತ್ರೀಶ್ವರ ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಿದರು.</p>.<p>ನಂದಿಕಂಬ, ಡೊಳ್ಳು ಕುಣಿತ, ಕೋಲಾಟ, ಬೀಸುಕಂಸಾಳೆ, ವೀರಗಾಸೆ, ಪಟದ ಕುಣಿತ, ಪೂಜಾ ಕುಣಿತಗಳ ಮೂಲಕ ಶಿವರಾತ್ರೀಶ್ವರ ಅವರ ಮೂರ್ತಿಯನ್ನು ಸುತ್ತೂರಿನಲ್ಲಿ ಮೆರವಣಿಗೆ ಮಾಡಲಾಯಿತು. ಜೆಎಸ್ಎಸ್ ಲಲಿತಾಕಲಾ ವೃಂದದ ಕಲಾವಿದರು ವಚನಗಾಯನವನ್ನು ಪ್ರಸ್ತುತಪಡಿಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ, ‘ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಸರಿಯಾದ ಅರಿವು ಇರಬೇಕು. ಅರಿವಿಲ್ಲದೆ ಪ್ರತಿಭಟನೆ ಮಾಡಬಾರದು. ಎಲ್ಲದ್ದಕ್ಕೂ ಇತಿಮಿತಿಗಳು ಇರಬೇಕು’ ಎಂದು ಹೇಳಿದರು.</p>.<p>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯುತ್ತಾರೆ. ಉಪ ಚುನಾವಣೆಯಲ್ಲಿ ಗೆದ್ದವರನ್ನು, ಸೋತವರನ್ನೂ ಜತೆಗೆ ಕರೆದುಕೊಂಡು ಹೋಗುತ್ತಾರೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಂಜನಗೂಡು ತಾಲ್ಲೂಕಿನ ಸುತ್ತೂರಿನ ವೀರಸಿಂಹಾಸನ ಮಠದ ಸ್ಥಾಪಾನಾಚಾರ್ಯ ಶಿವರಾತ್ರೀಶ್ವರ ಅವರ 1060ನೇ ಜಯಂತಿ ಮಹೋತ್ಸವ ಮಂಗಳವಾರ ಸುತ್ತೂರಿನಲ್ಲಿ ನೆರವೇರಿತು.</p>.<p>ಸುತ್ತೂರಿನ ಮೂಲಮಠದ ಆವರಣದಲ್ಲಿ ಸಚಿವ ಸೋಮಣ್ಣ ಶಿವರಾತ್ರೀಶ್ವರ ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಿದರು.</p>.<p>ನಂದಿಕಂಬ, ಡೊಳ್ಳು ಕುಣಿತ, ಕೋಲಾಟ, ಬೀಸುಕಂಸಾಳೆ, ವೀರಗಾಸೆ, ಪಟದ ಕುಣಿತ, ಪೂಜಾ ಕುಣಿತಗಳ ಮೂಲಕ ಶಿವರಾತ್ರೀಶ್ವರ ಅವರ ಮೂರ್ತಿಯನ್ನು ಸುತ್ತೂರಿನಲ್ಲಿ ಮೆರವಣಿಗೆ ಮಾಡಲಾಯಿತು. ಜೆಎಸ್ಎಸ್ ಲಲಿತಾಕಲಾ ವೃಂದದ ಕಲಾವಿದರು ವಚನಗಾಯನವನ್ನು ಪ್ರಸ್ತುತಪಡಿಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ, ‘ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಸರಿಯಾದ ಅರಿವು ಇರಬೇಕು. ಅರಿವಿಲ್ಲದೆ ಪ್ರತಿಭಟನೆ ಮಾಡಬಾರದು. ಎಲ್ಲದ್ದಕ್ಕೂ ಇತಿಮಿತಿಗಳು ಇರಬೇಕು’ ಎಂದು ಹೇಳಿದರು.</p>.<p>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯುತ್ತಾರೆ. ಉಪ ಚುನಾವಣೆಯಲ್ಲಿ ಗೆದ್ದವರನ್ನು, ಸೋತವರನ್ನೂ ಜತೆಗೆ ಕರೆದುಕೊಂಡು ಹೋಗುತ್ತಾರೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>