<p><strong>ಮೈಸೂರು:</strong> ‘ಸಂಸ್ಕೃತವನ್ನು ಹೆಚ್ಚು ಅಂಕ ಗಳಿಸುವ ವಿಷಯ ಎಂದು ವಿದ್ಯಾರ್ಥಿಗಳು ಅಭ್ಯಸಿಸುವ ಬದಲು ಭಾಷೆಯಾಗಿ ಅಧ್ಯಯನ ಮಾಡಬೇಕು’ ಎಂದು ‘ಸುಧರ್ಮಾ’ ಸಂಸ್ಕೃತ ದಿನ ಪತ್ರಿಕೆ ಸಂಪಾದಕ ಸಂಪತ್ಕುಮಾರ್ ತಿಳಿಸಿದರು.</p>.<p>ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ‘ಈ ಪ್ರಶಸ್ತಿ ನನಗೆ ಸಂದಿದ್ದಲ್ಲ. ಸಂಸ್ಕೃತಕ್ಕೆ ಸಿಕ್ಕ ಗೌರವ’ ಎಂದು ಹೇಳಿದರು.</p>.<p>‘ನಮ್ಮ ತಂದೆ ಆರಂಭಿಸಿದ್ದ ಈ ಪತ್ರಿಕೆ 50 ವರ್ಷದಿಂದ ಮುದ್ರಣಗೊಳ್ಳುತ್ತಿದೆ ಎಂದರೇ ಆಶ್ಚರ್ಯ ಎನಿಸುತ್ತಿದೆ. ವಿದೇಶಿಗರು ಇಲ್ಲಿಗೆ ಬಂದು ಸಂಸ್ಕೃತ ಕಲಿತು, ತಮ್ಮ ದೇಶದಲ್ಲಿ ಪ್ರಚಾರ ಮಾಡುತ್ತಿರುವಾಗ, ನಮ್ಮವರು ಹೆಚ್ಚು ಒಲವು ತೋರುತ್ತಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ‘ಟಿ.ವಿ, ಮೊಬೈಲ್ಗಳ ಕಾಲಘಟ್ಟದಲ್ಲಿ ಸಂಸ್ಕೃತ ಪತ್ರಿಕೆಯೊಂದು 50 ವರ್ಷ ಪೂರೈಸಿರುವುದು ಅದ್ಭುತ’ ಎಂದರು.</p>.<p>ಭಾರತೀಯ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ನ ಅಧ್ಯಕ್ಷ ಕೆ.ಎಸ್.ರಂಗಪ್ಪ ಮಾತನಾಡಿ ‘ನವ ಮಾಧ್ಯಮಗಳ ಅಬ್ಬರದಲ್ಲೂ ಪತ್ರಿಕೆಗಳು ತಮ್ಮದೇ ಆದ ವಿಶ್ವಾಸರ್ಹತೆ ಉಳಿಸಿಕೊಂಡು ಬಂದಿವೆ’ ಎಂದು ಹೇಳಿದರು.</p>.<p>ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ಉಪಸ್ಥಿತರಿದ್ದರು.</p>.<p>ಜೈಶಂಕರ ಬದನಗುಪ್ಪ ಸ್ವಾಗತಿಸಿದರು. ಸುಬ್ರಮಣ್ಯ ನಿರೂಪಿಸಿದರು. ಬಿ.ರಾಘವೇಂದ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಂಸ್ಕೃತವನ್ನು ಹೆಚ್ಚು ಅಂಕ ಗಳಿಸುವ ವಿಷಯ ಎಂದು ವಿದ್ಯಾರ್ಥಿಗಳು ಅಭ್ಯಸಿಸುವ ಬದಲು ಭಾಷೆಯಾಗಿ ಅಧ್ಯಯನ ಮಾಡಬೇಕು’ ಎಂದು ‘ಸುಧರ್ಮಾ’ ಸಂಸ್ಕೃತ ದಿನ ಪತ್ರಿಕೆ ಸಂಪಾದಕ ಸಂಪತ್ಕುಮಾರ್ ತಿಳಿಸಿದರು.</p>.<p>ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ‘ಈ ಪ್ರಶಸ್ತಿ ನನಗೆ ಸಂದಿದ್ದಲ್ಲ. ಸಂಸ್ಕೃತಕ್ಕೆ ಸಿಕ್ಕ ಗೌರವ’ ಎಂದು ಹೇಳಿದರು.</p>.<p>‘ನಮ್ಮ ತಂದೆ ಆರಂಭಿಸಿದ್ದ ಈ ಪತ್ರಿಕೆ 50 ವರ್ಷದಿಂದ ಮುದ್ರಣಗೊಳ್ಳುತ್ತಿದೆ ಎಂದರೇ ಆಶ್ಚರ್ಯ ಎನಿಸುತ್ತಿದೆ. ವಿದೇಶಿಗರು ಇಲ್ಲಿಗೆ ಬಂದು ಸಂಸ್ಕೃತ ಕಲಿತು, ತಮ್ಮ ದೇಶದಲ್ಲಿ ಪ್ರಚಾರ ಮಾಡುತ್ತಿರುವಾಗ, ನಮ್ಮವರು ಹೆಚ್ಚು ಒಲವು ತೋರುತ್ತಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ‘ಟಿ.ವಿ, ಮೊಬೈಲ್ಗಳ ಕಾಲಘಟ್ಟದಲ್ಲಿ ಸಂಸ್ಕೃತ ಪತ್ರಿಕೆಯೊಂದು 50 ವರ್ಷ ಪೂರೈಸಿರುವುದು ಅದ್ಭುತ’ ಎಂದರು.</p>.<p>ಭಾರತೀಯ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ನ ಅಧ್ಯಕ್ಷ ಕೆ.ಎಸ್.ರಂಗಪ್ಪ ಮಾತನಾಡಿ ‘ನವ ಮಾಧ್ಯಮಗಳ ಅಬ್ಬರದಲ್ಲೂ ಪತ್ರಿಕೆಗಳು ತಮ್ಮದೇ ಆದ ವಿಶ್ವಾಸರ್ಹತೆ ಉಳಿಸಿಕೊಂಡು ಬಂದಿವೆ’ ಎಂದು ಹೇಳಿದರು.</p>.<p>ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ಉಪಸ್ಥಿತರಿದ್ದರು.</p>.<p>ಜೈಶಂಕರ ಬದನಗುಪ್ಪ ಸ್ವಾಗತಿಸಿದರು. ಸುಬ್ರಮಣ್ಯ ನಿರೂಪಿಸಿದರು. ಬಿ.ರಾಘವೇಂದ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>