ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಯು ಬೆಂಬಲಿಗರನ್ನು ಸಂಭ್ರಮದಲ್ಲಿ ಮುಳುಗಿಸಿದೆ. ಗುರುವಾರ ಅವರ ಜನ್ಮದಿನದ ಅಂಗವಾಗಿ ನಗರದಲ್ಲಿ ವಿಶೇಷ ಕಾರ್ಯಕ್ರಮಗಳೂ ಆಯೋಜನೆಗೊಂಡಿವೆ. ಇಂದಿರಾ ಕ್ಯಾಂಟೀನ್ಗೆ ಹೋಳಿಗೆ. ಕಾರ್ಮಿಕರಿಗೆ ವಿಮಾ ಬಾಂಡ್, ಬಡವರಿಗೆ ದಿನಸಿ ಕಿಟ್ ವಿತರಣೆಯಂಥ ಕಾರ್ಯಕ್ರಮಗಳೂ ನಡೆಯಲಿವೆ. ‘ಭಾಗ್ಯವಿಧಾತ ಸಿದ್ದರಾಮಯ್ಯ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ವಿಚಾರ ಸಂಕಿರಣವೂ ಏರ್ಪಾಡಾಗಿದೆ.