<p><strong>ಮೈಸೂರು:</strong> ‘ಈಗ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಾಯವಿದೆ. ಸಾಹಿತಿಗಳು ಕೇಂದ್ರ ಸರ್ಕಾರವನ್ನು ಟೀಕಿಸಿದರೆ ಅದು ದೇಶದ್ರೋಹ ಅನ್ನುತ್ತಾರೆ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಅತಿ ಅಪಾಯಕಾರಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.<br /><br />ಮೈಸೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಹಾಗೂ ಪ್ರೊ.ಎಚ್.ಜೆ.ಲಕ್ಕಪ್ಪಗೌಡ ಸಾಹಿತ್ಯಾಭಿಮಾನಿ ಬಳಗದ ವತಿಯಿಂದ ಇಲ್ಲಿನ ಗಾನಭಾರತೀಯಲ್ಲಿ ಶನಿವಾರ ಏರ್ಪಡಿಸಿದ್ದ ಪ್ರೊ.ಎಚ್.ಕೆ.ಲಕ್ಕಪ್ಪಗೌಡ ಅವರಿಗೆ ನುಡಿನಮನ ಹಾಗೂ ಅವರ ಬದುಕು ಬರಹ; ಒಂದು ಮೆಲುಕು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /><br />ಅರ್ಥಪೂರ್ಣವಾದ ಟೀಕೆ, ಆಧಾರಸಹಿತವಾದ ಟೀಕೆ ಪ್ರಜಾಪ್ರಭುತ್ವದಲ್ಲಿ ಬೇಕು. ಟೀಕೆಯೆ ಇಲ್ಲವಾದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲ ಇಲ್ಲ ಎಂದರು.<br /><br />ಜಾನಪದ ವಿದ್ವಾಂಸರ ಪ್ರೊ.ಹಿ.ಶಿ.ರಾಮಚಂದ್ರೇಗೌಡ ಮಾತನಾಡಿ, ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /><br />ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲ ವರ್ಗದವರಿಂದ ಸಾಂಸ್ಕೃತಿಕ ನಾಯಕರು ಬರಬೇಕು. ಬಸವಣ್ಣ ಎಲ್ಲ ವರ್ಗದವರಿಗೂ ಲಿಂಗ ದೀಕ್ಷೆ ಕೊಟ್ಟು ಸಮಾನತೆ ನೀಡಿದರು. ಬಸವಣ್ಣನವರ ನಂತರ ಕುವೆಂಪು ನಂತರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ನಾಡು ಕಂಡ ಸಾಂಸ್ಕೃತಿಕ ನಾಯಕರು. ಜತೆಗೆ ಕರ್ನಾಟಕದ ಏಕೈಕ ವೈಚಾರಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಈಗ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಾಯವಿದೆ. ಸಾಹಿತಿಗಳು ಕೇಂದ್ರ ಸರ್ಕಾರವನ್ನು ಟೀಕಿಸಿದರೆ ಅದು ದೇಶದ್ರೋಹ ಅನ್ನುತ್ತಾರೆ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಅತಿ ಅಪಾಯಕಾರಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.<br /><br />ಮೈಸೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಹಾಗೂ ಪ್ರೊ.ಎಚ್.ಜೆ.ಲಕ್ಕಪ್ಪಗೌಡ ಸಾಹಿತ್ಯಾಭಿಮಾನಿ ಬಳಗದ ವತಿಯಿಂದ ಇಲ್ಲಿನ ಗಾನಭಾರತೀಯಲ್ಲಿ ಶನಿವಾರ ಏರ್ಪಡಿಸಿದ್ದ ಪ್ರೊ.ಎಚ್.ಕೆ.ಲಕ್ಕಪ್ಪಗೌಡ ಅವರಿಗೆ ನುಡಿನಮನ ಹಾಗೂ ಅವರ ಬದುಕು ಬರಹ; ಒಂದು ಮೆಲುಕು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /><br />ಅರ್ಥಪೂರ್ಣವಾದ ಟೀಕೆ, ಆಧಾರಸಹಿತವಾದ ಟೀಕೆ ಪ್ರಜಾಪ್ರಭುತ್ವದಲ್ಲಿ ಬೇಕು. ಟೀಕೆಯೆ ಇಲ್ಲವಾದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲ ಇಲ್ಲ ಎಂದರು.<br /><br />ಜಾನಪದ ವಿದ್ವಾಂಸರ ಪ್ರೊ.ಹಿ.ಶಿ.ರಾಮಚಂದ್ರೇಗೌಡ ಮಾತನಾಡಿ, ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /><br />ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲ ವರ್ಗದವರಿಂದ ಸಾಂಸ್ಕೃತಿಕ ನಾಯಕರು ಬರಬೇಕು. ಬಸವಣ್ಣ ಎಲ್ಲ ವರ್ಗದವರಿಗೂ ಲಿಂಗ ದೀಕ್ಷೆ ಕೊಟ್ಟು ಸಮಾನತೆ ನೀಡಿದರು. ಬಸವಣ್ಣನವರ ನಂತರ ಕುವೆಂಪು ನಂತರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ನಾಡು ಕಂಡ ಸಾಂಸ್ಕೃತಿಕ ನಾಯಕರು. ಜತೆಗೆ ಕರ್ನಾಟಕದ ಏಕೈಕ ವೈಚಾರಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>