<p><strong>ಮೈಸೂರು: </strong>ಮೊಬೈಲ್ನಲ್ಲಿ ಮಾತನಾಡುವಂತೆ ಫೋನ್ ಕೊಡಲು ಮುಂದಾದ ಬೆಂಬಲಿಗ ಹಾಗೂ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರೊಬ್ಬರ ಕೆನ್ನೆಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಾರಿಸಿದ ವಿಡಿಯೊ ಈ ಭಾಗದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>ಮೈಸೂರಿಗೆ ಹೊಂದಿಕೊಂಡಂತಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಾಡನಹಳ್ಳಿ ರವಿ ಎಂಬುವರೇ ಕಪಾಳಮೋಕ್ಷ ಮಾಡಿಸಿಕೊಂಡವರು.</p>.<p>ಸಿದ್ದರಾಮಯ್ಯ ಬುಧವಾರ ಮೈಸೂರಿಗೆ ಬಂದಿದ್ದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮಡಿಕೇರಿಗೆ ಹೊರಡಲು ಅನುವಾಗುತ್ತಿದ್ದಂತೆ, ನಾಡನಹಳ್ಳಿ ರವಿ ಸಿದ್ದರಾಮಯ್ಯ ಅವರಿಗೆ ಮೊಬೈಲ್ ನೀಡಲು ಮುಂದಾದರು.</p>.<p>ಇದರಿಂದ ಸಿಟ್ಟಾದ ಸಿದ್ದರಾಮಯ್ಯ, ಏಯ್ ಎಂದು ಗದರಿ ರವಿ ಕೆನ್ನೆಗೊಂದು ಬಾರಿಸಿ, ಅತ್ತ ಹೋಗು ಎಂದು ತಮ್ಮ ಕೈನಿಂದ ನೂಕಿದ ದೃಶ್ಯ ವಿಡಿಯೊ ಕ್ಲಿಪ್ಪಿಂಗ್ನಲ್ಲಿದೆ.</p>.<p>ತಂದೆ ಸಮಾನ: ‘ಮರಿಗೌಡರು ಸಿದ್ದರಾಮಯ್ಯ ಅವರಿಗೆ ಮೊಬೈಲ್ ಕೊಡುವಂತೆ ಹೇಳಿದರು. ಅದರಂತೆ ನಾನು ಫೋನ್ ಕೊಡಲು ಮುಂದಾದಾಗ, ನಾ ಮಡಿಕೇರಿಗೆ ಹೋಗಬೇಕಿದೆ. ಈಗ ಮಾತನಾಡಬೇಕಾ ? ಎಂದು ನನ್ನನ್ನು ಗದರಿದ ನಾಯಕರು, ಕೆನ್ನೆಗೆ ತಟ್ಟಿದರಷ್ಟೇ. ಅವರು ನನ್ನ ತಂದೆ ಸಮಾನ. ಇದಕ್ಕೆ ಬೇರೆ ಬಣ್ಣ ಕೊಡಬೇಕಿಲ್ಲ’ ಎಂದು ನಾಡನಹಳ್ಳಿ ರವಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೊಬೈಲ್ನಲ್ಲಿ ಮಾತನಾಡುವಂತೆ ಫೋನ್ ಕೊಡಲು ಮುಂದಾದ ಬೆಂಬಲಿಗ ಹಾಗೂ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರೊಬ್ಬರ ಕೆನ್ನೆಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಾರಿಸಿದ ವಿಡಿಯೊ ಈ ಭಾಗದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>ಮೈಸೂರಿಗೆ ಹೊಂದಿಕೊಂಡಂತಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಾಡನಹಳ್ಳಿ ರವಿ ಎಂಬುವರೇ ಕಪಾಳಮೋಕ್ಷ ಮಾಡಿಸಿಕೊಂಡವರು.</p>.<p>ಸಿದ್ದರಾಮಯ್ಯ ಬುಧವಾರ ಮೈಸೂರಿಗೆ ಬಂದಿದ್ದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮಡಿಕೇರಿಗೆ ಹೊರಡಲು ಅನುವಾಗುತ್ತಿದ್ದಂತೆ, ನಾಡನಹಳ್ಳಿ ರವಿ ಸಿದ್ದರಾಮಯ್ಯ ಅವರಿಗೆ ಮೊಬೈಲ್ ನೀಡಲು ಮುಂದಾದರು.</p>.<p>ಇದರಿಂದ ಸಿಟ್ಟಾದ ಸಿದ್ದರಾಮಯ್ಯ, ಏಯ್ ಎಂದು ಗದರಿ ರವಿ ಕೆನ್ನೆಗೊಂದು ಬಾರಿಸಿ, ಅತ್ತ ಹೋಗು ಎಂದು ತಮ್ಮ ಕೈನಿಂದ ನೂಕಿದ ದೃಶ್ಯ ವಿಡಿಯೊ ಕ್ಲಿಪ್ಪಿಂಗ್ನಲ್ಲಿದೆ.</p>.<p>ತಂದೆ ಸಮಾನ: ‘ಮರಿಗೌಡರು ಸಿದ್ದರಾಮಯ್ಯ ಅವರಿಗೆ ಮೊಬೈಲ್ ಕೊಡುವಂತೆ ಹೇಳಿದರು. ಅದರಂತೆ ನಾನು ಫೋನ್ ಕೊಡಲು ಮುಂದಾದಾಗ, ನಾ ಮಡಿಕೇರಿಗೆ ಹೋಗಬೇಕಿದೆ. ಈಗ ಮಾತನಾಡಬೇಕಾ ? ಎಂದು ನನ್ನನ್ನು ಗದರಿದ ನಾಯಕರು, ಕೆನ್ನೆಗೆ ತಟ್ಟಿದರಷ್ಟೇ. ಅವರು ನನ್ನ ತಂದೆ ಸಮಾನ. ಇದಕ್ಕೆ ಬೇರೆ ಬಣ್ಣ ಕೊಡಬೇಕಿಲ್ಲ’ ಎಂದು ನಾಡನಹಳ್ಳಿ ರವಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>