ಸಿದ್ದರಾಮಯ್ಯ ಅವರು ನನಗೆ ತಂದೆ ಸಮಾನ. ನನ್ನ ಗುರುಗಳು, ಹಿರಿಯರು. ಅವರ ಮಾರ್ಗದರ್ಶನದಿಂದ ನಾನು ಚೆನ್ನಾಗಿ ಬದುಕಿದ್ದೀನಿ. ಅವರ ಆಶೀರ್ವಾದ ಇದೆ. ಅವರು ಹೊಡೆದ್ರೂ ಏನೂ ಬೇಜಾರಿಲ್ಲ. ಬೇರೆ ರೀತಿ ಯಲ್ಲಿ ಅರ್ಥ ಮಾಡಿಕೊಳ್ಬೇಡಿ. ಸಿದ್ದರಾಮಯ್ಯ ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ಸಾಕಿದ ಮಗನಾಗಿದ್ದೇನೆ ಹೊರತು ಇನ್ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ.