ಕಸ ಹಾಗೂ ಕಟ್ಟಡ ತ್ಯಾಜ್ಯ ಸುರಿದಿರುವುದು ಕಂಡುಬಂದರೆ ಮಾರ್ಷಲ್ಗಳು ಹಾಗೂ ಪ್ರಹರಿ ಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗುತ್ತದೆ. ಕೆರೆಯ ಭದ್ರತೆ ಕುರಿತು ಮಾರ್ಷಲ್ಗಳು ಪ್ರತಿದಿನ ವರದಿ ನೀಡಬೇಕು. ಅದನ್ನು ಬಿಡಿಎ, ಬಿಬಿಎಂಪಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ವಾರಕ್ಕೊಮ್ಮೆ ಪರಿಶೀಲಿಸಲಿದ್ದಾರೆ ಎಂದು ಪಾಲಿಕೆ ಜಂಟಿ ಆಯುಕ್ತ (ಘನತ್ಯಾಜ್ಯ ನಿರ್ವಹಣೆ) ಸರ್ಫರಾಜ್ ಖಾನ್ ‘ಪ್ರಜಾವಾಣಿ’ಗೆ ತಿಳಿಸಿದರು.