‘ವನ್ಯಜೀವಿಗಳನ್ನು ಅರಣ್ಯ ಇಲಾಖೆಯ ವೈದ್ಯರೇ ಚಿಕಿತ್ಸೆ ನೀಡಬೇಕು ಎಂದು ಕೆಲವು ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ’ ಎಂದು ಹೆಸರು ಹೇಳಲಿಚ್ಛಿಸದ ಪಶು ವೈದ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ‘ಅರಣ್ಯ ಇಲಾಖೆಯ ವೈದ್ಯರ ಬಳಿಗೆ ಕಳುಹಿಸುವಷ್ಟರಲ್ಲಿ ಅದರ ಸ್ಥಿತಿ ಗಂಭೀರವಾಗುತ್ತಿತ್ತು. ಮಾನವೀಯ ದೃಷ್ಟಿಯಿಂದ ಹಾವಿಗೆ ಚಿಕಿತ್ಸೆ ನೀಡಲಾಗಿದೆ’ ಎಂದು ಅವರು ಸ್ಪಷ್ಟಪಡಿಸಿದರು.