ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ವಹಿಸಿದ ಹಿನ್ನೆಲೆಯಲ್ಲಿ ವೈರಸ್ ಹರಡಿಲ್ಲ. ಪ್ರತಿ ಜಿಲ್ಲೆಗಳಲ್ಲಿ ಅಲ್ಲದೇ ತಾಲ್ಲೂಕುಮಟ್ಟದಲ್ಲಿ ರೋಗ ಪತ್ತೆ ಸಮಿತಿ ಮಾಡಲಾಗಿದೆ. ಸೋಂಕು ಪತ್ತೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಕ್ತ ಪರೀಕ್ಷೆ ಕೇಂದ್ರಗಳನ್ನು ತೆರಯಲಾಗಿದೆ. ಸೋಂಕಿತ ರೋಗಿಗಳಿಗಾಗಿ ಮುಂಜಾಗ್ರತಾ ಕ್ರಮವಾಗಿ2,500 ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದರು.