ಮೈಸೂರು: ಕಲಾವಿದರಿಗೆ ಸಮರ್ಪಕವಾಗಿ ಪ್ರತಿ ತಿಂಗಳೂ ಗೌರವಧನ ಕೊಡಿ. ನಿಮ್ಮಿಂದ ಹಾಡಿ ಬದುಕು ಕಟ್ಟಿಕೊಳ್ಳುತ್ತೇವೆ ಎಂದು ಕಲಾವಿದರಾದ ಸೋಬಾನೆ ಗೌರಮ್ಮ ಸಚಿವ ಎಸ್.ಟಿ.ಸೋಮಶೇಖರ್ ಅವರಲ್ಲಿ ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯವು ವಿಶೇಷ ಘಟಕ ಯೋಜನೆಯಡಿ ಇಲ್ಲಿನ ರಂಗಾಯಣದಲ್ಲಿ ಶನಿವಾರ ಏರ್ಪಡಿಸಿದ್ದ 'ರಂಗಾಯಣದಂಗಳದಲ್ಲಿ ಜನಪದರು' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮಿಂದ ನನ್ನಂತಹ ಬಡವರು ಬದುಕು ಕಟ್ಟಿಕೊಳ್ಳುತ್ತಾರೆ ಎಂದರು.
ನಂತರ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಗೌರಮ್ಮ ಅವರು ಹೇಳಿರುವ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.