<p>ಮೈಸೂರು: ಮಾಧ್ಯಮಗಳು ಸಮಾಜದ ಕನ್ನಡಿ. ಈಗ ಕನ್ನಡಿ ಒಡೆಯುತ್ತಿದೆ. ಇದಕ್ಕೆ ಮಾಸ್ಕ್ ಹಾಕಲಾಗುತ್ತಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ.ಡಿ.ಆನಂದ ಆತಂಕ ವ್ಯಕ್ತಪಡಿಸಿದರು.</p>.<p>ಇಲ್ಲಿನ ಗೋವರ್ಧನ್ ಹೋಟೆಲ್ನಲ್ಲಿ ಭಾನುವಾರ ನಡೆದ ‘ಕನ್ನಡಿಗರ ಭುವನ ಸಂಗಾತಿ’ ಪಾಕ್ಷಿಕದ 21ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಜನರ ನೋವಿಗೆ ಸ್ಪಂದಿಸಬೇಕಿದ್ದ ಮಾಧ್ಯಮಗಳು ಈಗ ಅಂತರರಾಷ್ಟ್ರೀಯ ಬಂಡವಾಳವನ್ನು ಆಕರ್ಷಿಸುತ್ತಿವೆ. ಬಂಡವಾಳ ಹಾಕಿ ಹೆಚ್ಚು ಹೆಚ್ಚು ಹಣ ಗಳಿಸುವ ಉದ್ಯಮವಾಗಿದೆ. ತಮ್ಮ ವ್ಯಾಪಾರ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುವ ನಿಟ್ಟಿನಲ್ಲಿ ಮಾಧ್ಯಮಗಳು ಹೆಜ್ಜೆ ಹಾಕುತ್ತಿವೆ ಎಂದರು.</p>.<p>ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ‘ಸರ್ಕಾರಗಳು ಜನರ ಕಣ್ಣಿಗೆ ಮಣ್ಣನ್ನು ಮಾತ್ರವಲ್ಲ ಖಾರದ ಪುಡಿಯನ್ನೂ ಎರಚುತ್ತಿವೆ’ ಎಂದು ಕಿಡಿಕಾರಿದರು.</p>.<p>ರೈತರ, ಕಾರ್ಮಿಕರ, ಮಹಿಳೆಯರ ದನಿಯನ್ನು ಅಡಗಿಸಲಾಗುತ್ತಿದೆ. ರಾಜಪ್ರಭುತ್ವಕ್ಕಿಂತಲೂ ಹೆಚ್ಚಿನ ಸರ್ವಾಧಿಕಾರತ್ವ ಕಂಡು ಬರುತ್ತಿದೆ. ನಾವೇನು ಜೀತದಾಳುಗಳಾ ಎಂದು ಪ್ರಶ್ನಿಸಿದ ಅವರು, ಅಂಬೇಡ್ಕರ್ವಾದಿಗಳು ಮೌನವಾಗಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಮಾತನಾಡಿ, ‘ಒಂದು ವಾರದಿಂದ ಸುದ್ದಿವಾಹಿನಿಗಳಲ್ಲಿ ಬರುತ್ತಿರುವ ಸುದ್ದಿಗಳನ್ನು ನೋಡಿದರೆ ತಲೆತಗ್ಗಿಸುವಂತಾಗಿದೆ. ನಿರ್ಲಕ್ಷಿತರ ನೋವಿಗೆ ಸ್ಪಂದಿಸುವಂತಹ ಜವಾಬ್ದಾರಿಯನ್ನು ಮಾಧ್ಯಮಗಳು ಮರೆಯಬಾರದು’ ಎಂದು ಕಿವಿಮಾತು ಹೇಳಿದರು.</p>.<p>ಉರಿಲಿಂಗಪೆದ್ದಿ ಮಠದ ಪೀಠಾಧ್ಯಕ್ಷ ಜ್ಞಾನಪ್ರಕಾಶಸ್ವಾಮೀಜಿ, ಪತ್ರಕರ್ತ ಸೋಮಯ್ಯ ಮಲೆಯೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಮಾಧ್ಯಮಗಳು ಸಮಾಜದ ಕನ್ನಡಿ. ಈಗ ಕನ್ನಡಿ ಒಡೆಯುತ್ತಿದೆ. ಇದಕ್ಕೆ ಮಾಸ್ಕ್ ಹಾಕಲಾಗುತ್ತಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ.ಡಿ.ಆನಂದ ಆತಂಕ ವ್ಯಕ್ತಪಡಿಸಿದರು.</p>.<p>ಇಲ್ಲಿನ ಗೋವರ್ಧನ್ ಹೋಟೆಲ್ನಲ್ಲಿ ಭಾನುವಾರ ನಡೆದ ‘ಕನ್ನಡಿಗರ ಭುವನ ಸಂಗಾತಿ’ ಪಾಕ್ಷಿಕದ 21ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಜನರ ನೋವಿಗೆ ಸ್ಪಂದಿಸಬೇಕಿದ್ದ ಮಾಧ್ಯಮಗಳು ಈಗ ಅಂತರರಾಷ್ಟ್ರೀಯ ಬಂಡವಾಳವನ್ನು ಆಕರ್ಷಿಸುತ್ತಿವೆ. ಬಂಡವಾಳ ಹಾಕಿ ಹೆಚ್ಚು ಹೆಚ್ಚು ಹಣ ಗಳಿಸುವ ಉದ್ಯಮವಾಗಿದೆ. ತಮ್ಮ ವ್ಯಾಪಾರ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುವ ನಿಟ್ಟಿನಲ್ಲಿ ಮಾಧ್ಯಮಗಳು ಹೆಜ್ಜೆ ಹಾಕುತ್ತಿವೆ ಎಂದರು.</p>.<p>ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ‘ಸರ್ಕಾರಗಳು ಜನರ ಕಣ್ಣಿಗೆ ಮಣ್ಣನ್ನು ಮಾತ್ರವಲ್ಲ ಖಾರದ ಪುಡಿಯನ್ನೂ ಎರಚುತ್ತಿವೆ’ ಎಂದು ಕಿಡಿಕಾರಿದರು.</p>.<p>ರೈತರ, ಕಾರ್ಮಿಕರ, ಮಹಿಳೆಯರ ದನಿಯನ್ನು ಅಡಗಿಸಲಾಗುತ್ತಿದೆ. ರಾಜಪ್ರಭುತ್ವಕ್ಕಿಂತಲೂ ಹೆಚ್ಚಿನ ಸರ್ವಾಧಿಕಾರತ್ವ ಕಂಡು ಬರುತ್ತಿದೆ. ನಾವೇನು ಜೀತದಾಳುಗಳಾ ಎಂದು ಪ್ರಶ್ನಿಸಿದ ಅವರು, ಅಂಬೇಡ್ಕರ್ವಾದಿಗಳು ಮೌನವಾಗಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಮಾತನಾಡಿ, ‘ಒಂದು ವಾರದಿಂದ ಸುದ್ದಿವಾಹಿನಿಗಳಲ್ಲಿ ಬರುತ್ತಿರುವ ಸುದ್ದಿಗಳನ್ನು ನೋಡಿದರೆ ತಲೆತಗ್ಗಿಸುವಂತಾಗಿದೆ. ನಿರ್ಲಕ್ಷಿತರ ನೋವಿಗೆ ಸ್ಪಂದಿಸುವಂತಹ ಜವಾಬ್ದಾರಿಯನ್ನು ಮಾಧ್ಯಮಗಳು ಮರೆಯಬಾರದು’ ಎಂದು ಕಿವಿಮಾತು ಹೇಳಿದರು.</p>.<p>ಉರಿಲಿಂಗಪೆದ್ದಿ ಮಠದ ಪೀಠಾಧ್ಯಕ್ಷ ಜ್ಞಾನಪ್ರಕಾಶಸ್ವಾಮೀಜಿ, ಪತ್ರಕರ್ತ ಸೋಮಯ್ಯ ಮಲೆಯೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>