ಪುಷ್ಪ, ವಿದ್ಯುತ್ ದೀಪಾಲಂಕಾರ ದಿಂದ ಸಿಂಗಾರಗೊಂಡಿದ್ದ ತೆಪ್ಪದಲ್ಲಿ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಿದ ಬಳಿಕ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಎಂ.ಎಚ್.ರವೀಂದ್ರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಕಪಿಲಾ ಸ್ನಾನಘಟ್ಟದಿಂದ ಒಂದು ಬಾರಿ ಪ್ರದಕ್ಷಿಣೆ ಹಾಕಿದ ತೆಪ್ಪೋತ್ಸವ ಸ್ವಸ್ಥಾನಕ್ಕೆ ಮರಳಿತು.