ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ವಿ. ಶ್ರೀನಿವಾಸಪ್ರಸಾದ್ ಆರ್‌ಎಸ್‌ಎಸ್‌ನಲ್ಲಿದ್ದವರು: ಸಿ.ಪಿ.ಕೆ

Last Updated 26 ಜನವರಿ 2020, 13:27 IST
ಅಕ್ಷರ ಗಾತ್ರ

ಮೈಸೂರು: ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ಆರ್‌ಎಸ್‌ಎಸ್‌ನಲ್ಲಿ ಇದ್ದವರು. ಬಹಳ ಜನರಿಗೆ ಈ ವಿಷಯ ಗೊತ್ತಿಲ್ಲ ಎಂದು ವಿದ್ವಾಂಸರಾದ ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ) ತಿಳಿಸಿದರು.

ಸಮಾನತೆ, ಸ್ವಾಭಿಮಾನ, ಸ್ವಾವಲಂಬನೆ ಪ್ರತಿಷ್ಠಾನದ ವತಿಯಿಂದ ‘ವಿ. ಶ್ರೀನಿವಾಸಪ್ರಸಾದ್: ನಾವು ಕಂಡಂತೆ’ ಅಭಿನಂದನ ಗ್ರಂಥವನ್ನು ಭಾನುವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅವರಲ್ಲಿರುವ ಶಿಸ್ತು ಹಾಗೂ ಅವರು ಬಿಜೆಪಿ ಸೇರಿದ್ದನ್ನು ನೋಡಿದರೆ ಅದು ಕೇವಲ ಆಕಸ್ಮಿಕವಾಗಿರದು ಎಂದು ಅನ್ನಿಸುತ್ತದೆ. ಅವರು ಪಕ್ಷಾಂತರಿ ಆದರೂ ತತ್ವಾಂತರಿ ಅಲ್ಲ ಎಂದು ಅವರು ತಿಳಿಸಿದರು.

ರಾಜಕಾರಣಿಗಳು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಸಾಹಿತ್ಯ ಕಾರ್ಯಕ್ರಮಗಳನ್ನು ವೀಕ್ಷಿಸಬೇಕು. ಅವರು ವೇದಿಕೆ ಹತ್ತಬಾರದು ಎಂದು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT