‘ಈ ಬಾರಿ ಉತ್ಸವದಲ್ಲಿ ವಿಶೇಷವಾಗಿ ಹೆಲಿಕಾಪ್ಟರ್ ಜಾಯ್ ರೈಡ್, ಕೆಆರ್ಎಸ್ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೋತ್ಸವ ಆಯೋಜನೆ ಮಾಡಲಾಗಿದೆ. ಬೃಂದಾವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲಾಗುವುದು. ಜೊತೆಗೆ ಯುವದಸರಾ, ಗಾಳಿ ಪಟ ಉತ್ಸವ, ಆಹಾರ ಮೇಳ, ಪರಂಪರಾ ದರ್ಶನ, ಮಹಿಳಾ–ಮಕ್ಕಳ ದಸರಾ, ಕವಿಗೋಷ್ಠಿ ಆಯೋಜನೆ ಮಾಡಲಾಗಿದೆ’ ಎಂದರು.