ಮೈಸೂರು ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳಿದ್ದು, 10 ಕ್ಷೇತ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದೇನೆ. ವರುಣಾದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ, ನರಸಿಂಹರಾಜ ಕ್ಷೇತ್ರದಲ್ಲಿ ತನ್ವೀರ್ ಸೇಠ್, ನಂಜನಗೂಡು ಶಾಸಕ ಹರ್ಷವರ್ಧನ್, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್, ತಿ.ನರಸೀಪುರ, ಪಿರಿಯಾಪಟ್ಟಣ ಶಾಸಕರು, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಸಂಸದ ಪ್ರತಾಪಸಿಂಹ ಸಹಕಾರ ನೀಡಿದ್ದು, ಪರಿಶೀಲನೆ ವೇಳೆ ಪಾಲ್ಗೊಂಡಿದ್ದರು ಎಂದರು.
‘ಸಭೆ ನಡೆಸಿ ಬೆಡ್ ಹಾಗೂ ಇತರ ವ್ಯವಸ್ಥೆ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗಿದೆ. ಬೆಡ್ ಕೋರಿ ನನಗೂ ಹತ್ತಾರು ಕರೆಗಳು ಬರುತ್ತಿವೆ. ಆದರೆ, ಪ್ರಭಾವ ಬೀರುತ್ತಿಲ್ಲ, ಶಿಫಾರಸು ಮಾಡುತ್ತಿಲ್ಲ. ಸಂಕಷ್ಟಕ್ಕೆ ಒಳಗಾದವರಿಗೆ, ತೀವ್ರ ಸಮಸ್ಯೆ ಎದುರಿಸುತ್ತಿರುವವರಿಗೆ ಮೊದಲು ಬೆಡ್ ಕೊಡಿ ಎಂದು ವೈದ್ಯರಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.