ಮಳೆ ಸಾಧ್ಯತೆ ಕುರಿತ ಪ್ರಶ್ನೆಗೆ, ‘ಹತ್ತು, ಹದಿನೈದು ವರ್ಷಗಳ ಇತಿಹಾಸ ಗಮನಿಸಿದರೆ ಬೆಳಿಗ್ಗೆ ವೇಳೆ ಮಳೆ ಬಂದ ನಿದರ್ಶನವಿಲ್ಲ. ಎಸ್ಜಿಪಿ ನಿರ್ದೇಶನದ ಅನುಸಾರ ಸಿದ್ಧತೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನಿಯು ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 20 ಜನ ಫಲಾನುಭವಿಗಳನ್ನು ಗುರುತಿಸಲಾಗಿದ್ದು ಯಾರೊಂದಿಗೆ ಬೇಕಾದರೂ ಸಂವಾದ ನಡೆಸಬಹುದು’ ಎಂದು ಹೇಳಿದರು.