<p><strong>ಮೈಸೂರು:</strong> ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಾತಿಗೆ ತೂಕವಿತ್ತು. ಈಗ ಅವರ ಮಾತನ್ನು ಅವರ ಪಕ್ಷದ ಕಾರ್ಯಕರ್ತರೇ ಕೇಳುತ್ತಿಲ್ಲ. ಅವರ ಮಾತಿಗೆ ಕಿಮ್ಮತ್ತು ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣನೆ ಮಾಡಿರುವುದರಿಂದ ಆರ್ಎಸ್ಎಸ್, ಟೀಕಿಸಿ ಮುಂಚೂಣಿಗೆ ಬರಲು ಯತ್ನಿಸುತ್ತಾರೆ ಎಂದು ಇಲ್ಲಿ ಭಾನುವಾರ ಸುದ್ದಿಗಾರರಿಗೆ ಹೇಳಿದರು.</p>.<p>ಸಿದ್ದರಾಮಯ್ಯ ಆರ್ಎಸ್ಎಸ್ ಬಗ್ಗೆ ಅಧ್ಯಯನ ಮಾಡಿಲ್ಲ. ಅವರಿಗೆ ಆ ಕುರಿತು ಕನಿಷ್ಠ ಜ್ಞಾನವೂ ಇಲ್ಲ. ಅವರನ್ನು ಒಮ್ಮೆ ಆರ್ಎಸ್ಎಸ್ ಕಚೇರಿಗೆ ಕರೆದೊಯ್ಯುತ್ತೇವೆ. ಅವರು ಅಲ್ಲಿನ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡಲಿ. ಇಲ್ಲವೇ ಆರ್ಎಸ್ಎಸ್ ಕುರಿತ ಪುಸ್ತಕ ನೀಡುತ್ತೇವೆ. ಆಗಲಾದರೂ ಅವರಿಗೆ ಆರ್ಎಸ್ಎಸ್ ಮಾಡುವ ಸಮಾಜಮುಖಿ ಕಾರ್ಯಗಳು ಅರ್ಥವಾಗಬಹುದು ಎಂದರು.</p>.<p>ಕಳೆದ ಎರಡು ವರ್ಷಗಳಿಂದ ನಾನು ಆರ್ಎಸ್ಎಸ್ ಬಗ್ಗೆ ತಿಳಿದುಕೊಂಡಿದ್ದೇನೆ, ಅವರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದನ್ನು ಸಿದ್ದರಾಮಯ್ಯ ಅವರು ಸಹಿಸುತ್ತಿಲ್ಲ. ಸದ್ಯದಲ್ಲೇ ಅವರಿಗೆ ಆರ್ಎಸ್ಎಸ್ ಕುರಿತ ಪುಸ್ತಕ ಕಳುಹಿಸಲಾಗುವುದು ಎಂದು ಹೇಳಿದರು.</p>.<p>ಸಿದ್ದರಾಮಯ್ಯ ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವಂತಿಲ್ಲ. ಸುಮ್ಮನೇ ಟೀಕೆ ಮಾಡುವ ಬದಲು ವಿರೋಧ ಪಕ್ಷವಾಗಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ವೀಕ್ಷಿಸಲಿ ಎಂದು ಸಲಹೆ ನೀಡಿದರು.</p>.<p>ವಿಶ್ವನಾಥ್ ಅವರು ಯಾವಾಗಲೂ ಸಲಹೆ ಕೊಡುತ್ತಿರುತ್ತಾರೆ. ಒಳ್ಳೆಯ ಅಂಶವನ್ನು ಸ್ವೀಕಾರ ಮಾಡಿ ಉಳಿದಿದ್ದನ್ನು ಬಿಡುತ್ತಾರೆ.<br />ಪಕ್ಷದ ಅಧ್ಯಕ್ಷರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಪಠ್ಯ ಪುಸ್ತಕ ಪರಿಷ್ಕರಣ ಸಂಬಂಧ ಸಚಿವ ನಾಗೇಶ್ ಅವರು ಸಮರ್ಥವಾಗಿ ಉತ್ತರ ನೀಡಿದ್ದಾರೆ ಎಂದು ಹೇಳಿದರು.</p>.<p>ಪಠ್ಯ ಪುಸ್ತಕಗಳನ್ನು ಯಾರೂ ಕೂಡ ಸರಿಯಾಗಿ ಓದದೇ ರಾಜಕೀಯ ಮಾಡುತ್ತಿದ್ದಾರೆ. ಮೊದಲು ಪುಸ್ತಕ ಓದಲಿ. ಕೇಸರಿಕರಣ ಬಗ್ಗೆ ಚರ್ಚೆ ಆಮೇಲೆ ಮಾಡಲಿ. ವಿಶ್ವನಾಥ್ ಎಲ್ಲಾ ವಿಷಯಗಳ ಬಗ್ಗೆ ತಿಳಿದುಕೊಂಡಿರುವವರು ಹೀಗಾಗಿ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಾತಿಗೆ ತೂಕವಿತ್ತು. ಈಗ ಅವರ ಮಾತನ್ನು ಅವರ ಪಕ್ಷದ ಕಾರ್ಯಕರ್ತರೇ ಕೇಳುತ್ತಿಲ್ಲ. ಅವರ ಮಾತಿಗೆ ಕಿಮ್ಮತ್ತು ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣನೆ ಮಾಡಿರುವುದರಿಂದ ಆರ್ಎಸ್ಎಸ್, ಟೀಕಿಸಿ ಮುಂಚೂಣಿಗೆ ಬರಲು ಯತ್ನಿಸುತ್ತಾರೆ ಎಂದು ಇಲ್ಲಿ ಭಾನುವಾರ ಸುದ್ದಿಗಾರರಿಗೆ ಹೇಳಿದರು.</p>.<p>ಸಿದ್ದರಾಮಯ್ಯ ಆರ್ಎಸ್ಎಸ್ ಬಗ್ಗೆ ಅಧ್ಯಯನ ಮಾಡಿಲ್ಲ. ಅವರಿಗೆ ಆ ಕುರಿತು ಕನಿಷ್ಠ ಜ್ಞಾನವೂ ಇಲ್ಲ. ಅವರನ್ನು ಒಮ್ಮೆ ಆರ್ಎಸ್ಎಸ್ ಕಚೇರಿಗೆ ಕರೆದೊಯ್ಯುತ್ತೇವೆ. ಅವರು ಅಲ್ಲಿನ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡಲಿ. ಇಲ್ಲವೇ ಆರ್ಎಸ್ಎಸ್ ಕುರಿತ ಪುಸ್ತಕ ನೀಡುತ್ತೇವೆ. ಆಗಲಾದರೂ ಅವರಿಗೆ ಆರ್ಎಸ್ಎಸ್ ಮಾಡುವ ಸಮಾಜಮುಖಿ ಕಾರ್ಯಗಳು ಅರ್ಥವಾಗಬಹುದು ಎಂದರು.</p>.<p>ಕಳೆದ ಎರಡು ವರ್ಷಗಳಿಂದ ನಾನು ಆರ್ಎಸ್ಎಸ್ ಬಗ್ಗೆ ತಿಳಿದುಕೊಂಡಿದ್ದೇನೆ, ಅವರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದನ್ನು ಸಿದ್ದರಾಮಯ್ಯ ಅವರು ಸಹಿಸುತ್ತಿಲ್ಲ. ಸದ್ಯದಲ್ಲೇ ಅವರಿಗೆ ಆರ್ಎಸ್ಎಸ್ ಕುರಿತ ಪುಸ್ತಕ ಕಳುಹಿಸಲಾಗುವುದು ಎಂದು ಹೇಳಿದರು.</p>.<p>ಸಿದ್ದರಾಮಯ್ಯ ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವಂತಿಲ್ಲ. ಸುಮ್ಮನೇ ಟೀಕೆ ಮಾಡುವ ಬದಲು ವಿರೋಧ ಪಕ್ಷವಾಗಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ವೀಕ್ಷಿಸಲಿ ಎಂದು ಸಲಹೆ ನೀಡಿದರು.</p>.<p>ವಿಶ್ವನಾಥ್ ಅವರು ಯಾವಾಗಲೂ ಸಲಹೆ ಕೊಡುತ್ತಿರುತ್ತಾರೆ. ಒಳ್ಳೆಯ ಅಂಶವನ್ನು ಸ್ವೀಕಾರ ಮಾಡಿ ಉಳಿದಿದ್ದನ್ನು ಬಿಡುತ್ತಾರೆ.<br />ಪಕ್ಷದ ಅಧ್ಯಕ್ಷರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಪಠ್ಯ ಪುಸ್ತಕ ಪರಿಷ್ಕರಣ ಸಂಬಂಧ ಸಚಿವ ನಾಗೇಶ್ ಅವರು ಸಮರ್ಥವಾಗಿ ಉತ್ತರ ನೀಡಿದ್ದಾರೆ ಎಂದು ಹೇಳಿದರು.</p>.<p>ಪಠ್ಯ ಪುಸ್ತಕಗಳನ್ನು ಯಾರೂ ಕೂಡ ಸರಿಯಾಗಿ ಓದದೇ ರಾಜಕೀಯ ಮಾಡುತ್ತಿದ್ದಾರೆ. ಮೊದಲು ಪುಸ್ತಕ ಓದಲಿ. ಕೇಸರಿಕರಣ ಬಗ್ಗೆ ಚರ್ಚೆ ಆಮೇಲೆ ಮಾಡಲಿ. ವಿಶ್ವನಾಥ್ ಎಲ್ಲಾ ವಿಷಯಗಳ ಬಗ್ಗೆ ತಿಳಿದುಕೊಂಡಿರುವವರು ಹೀಗಾಗಿ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>