<p><strong>ಮೈಸೂರು: </strong>ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್ಎಸ್ಕೆ) ಪುನಶ್ಚೇತನಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದು ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಒತ್ತಾಯಿಸಿವೆ.</p>.<p>ಈ ಕುರಿತು ಶನಿವಾರ ಇಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಉಭಯ ಸಂಘಟನೆಗಳ ಪದಾಧಿಕಾರಿಗಳು ಕಾರ್ಖಾನೆಯ ಆರಂಭವನ್ನು ಸ್ವಾಗತಿಸಿದರು.</p>.<p>‘ಕಾರ್ಖಾನೆಯ ಗುತ್ತಿಗೆ ಪಡೆದಿರುವ ಶಾಸಕ ಮುರುಗೇಶ್ ನಿರಾಣಿ ಸಕ್ಕರೆ ತಂತ್ರಜ್ಞಾನದಲ್ಲಿ ಅಪಾರ ಅನುಭವ ಹೊಂದಿದ್ದಾರೆ. 7 ಸಕ್ಕರೆ ಕಾರ್ಖಾನೆಗಳನ್ನು ಹೊಂದಿರುವ ಇವರ ಸುಪರ್ದಿಯಲ್ಲಿ ಕಾರ್ಖಾನೆ ಯಶಸ್ವಿಯಾಗಿ ಮುನ್ನಡೆಯುವ ವಿಶ್ವಾಸ ಇದೆ’ ಎಂದು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ತಿಳಿಸಿದರು.</p>.<p>ಸುಮಾರು 60 ವರ್ಷ ಹಳೆಯದಾದ ಈ ಕಾರ್ಖಾನೆಯಲ್ಲಿ 450 ಕಾರ್ಮಿಕರು ಇದ್ದಾರೆ. ಸಾವಿರಾರು ರೈತ ಕುಟುಂಬಗಳಿಗೆ ಇದುವೇ ಆಧಾರ ಎನಿಸಿದೆ. ಸರ್ಕಾರ ಎಷ್ಟೇ ಆರ್ಥಿಕ ಶಕ್ತಿ ತುಂಬಿದರೂ ಇದನ್ನು ನಡೆಸಲಾಗಲಿಲ್ಲ. ಈಗ ನಿರಾಣಿ ಅವರಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸರ್ಕಾರ ನಿರಾಣಿ ಅವರಿಗೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡಿರುವುದು ಸರಿಯಾದ ಕ್ರಮ ಅಲ್ಲ ಎಂದು ಕೆಲವರು ಅನಗತ್ಯವಾಗಿ ವಿವಾದ ಎಬ್ಬಿಸುತ್ತಿದ್ದಾರೆ. ನ್ಯಾಯಾಲಯವೂ ಈ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿಲ್ಲ. ಸಾವಿರಾರು ಮಂದಿ ರೈತರಿಗೆ ಅನುಕೂಲವಾಗುತ್ತದೆ ಎನ್ನುವುದಾದರೆ ನಿರಾಣಿ ಅವರಿಗೆ ಬೆಂಬಲ ಏಕೆ ನೀಡಬಾರದು ಎಂದು ಪ್ರಶ್ನಿಸಿದರು.</p>.<p>ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಮಾತನಾಡಿ, ‘ಕಬ್ಬು ಅರೆಯಲು ನಿರಾಣಿ ಶುಗರ್ಸ್ಗೆ ಯಾರೂ ಅಡಚಣೆ ಉಂಟು ಮಾಡಬಾರದು. ಒಂದು ವೇಳೆ ಇತರೆ ಸಕ್ಕರೆ ಕಾರ್ಖಾನೆಗಳು ತೊಂದರೆ ಕೊಟ್ಟಲ್ಲಿ ಪ್ರತಿ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಕರ್ನಾಟಕ ಕನ್ನಡ ವೇದಿಕೆಯ ಅಧ್ಯಕ್ಷ ಸುರೇಶ್ಬಾಬು, ಸಾಮಾಜಿಕ ಕಾರ್ಯಕರ್ತ ಮಹೇಶ್, ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಪರಿಸರವಾದಿ ಭಾನು ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್ಎಸ್ಕೆ) ಪುನಶ್ಚೇತನಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದು ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಒತ್ತಾಯಿಸಿವೆ.</p>.<p>ಈ ಕುರಿತು ಶನಿವಾರ ಇಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಉಭಯ ಸಂಘಟನೆಗಳ ಪದಾಧಿಕಾರಿಗಳು ಕಾರ್ಖಾನೆಯ ಆರಂಭವನ್ನು ಸ್ವಾಗತಿಸಿದರು.</p>.<p>‘ಕಾರ್ಖಾನೆಯ ಗುತ್ತಿಗೆ ಪಡೆದಿರುವ ಶಾಸಕ ಮುರುಗೇಶ್ ನಿರಾಣಿ ಸಕ್ಕರೆ ತಂತ್ರಜ್ಞಾನದಲ್ಲಿ ಅಪಾರ ಅನುಭವ ಹೊಂದಿದ್ದಾರೆ. 7 ಸಕ್ಕರೆ ಕಾರ್ಖಾನೆಗಳನ್ನು ಹೊಂದಿರುವ ಇವರ ಸುಪರ್ದಿಯಲ್ಲಿ ಕಾರ್ಖಾನೆ ಯಶಸ್ವಿಯಾಗಿ ಮುನ್ನಡೆಯುವ ವಿಶ್ವಾಸ ಇದೆ’ ಎಂದು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ತಿಳಿಸಿದರು.</p>.<p>ಸುಮಾರು 60 ವರ್ಷ ಹಳೆಯದಾದ ಈ ಕಾರ್ಖಾನೆಯಲ್ಲಿ 450 ಕಾರ್ಮಿಕರು ಇದ್ದಾರೆ. ಸಾವಿರಾರು ರೈತ ಕುಟುಂಬಗಳಿಗೆ ಇದುವೇ ಆಧಾರ ಎನಿಸಿದೆ. ಸರ್ಕಾರ ಎಷ್ಟೇ ಆರ್ಥಿಕ ಶಕ್ತಿ ತುಂಬಿದರೂ ಇದನ್ನು ನಡೆಸಲಾಗಲಿಲ್ಲ. ಈಗ ನಿರಾಣಿ ಅವರಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸರ್ಕಾರ ನಿರಾಣಿ ಅವರಿಗೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡಿರುವುದು ಸರಿಯಾದ ಕ್ರಮ ಅಲ್ಲ ಎಂದು ಕೆಲವರು ಅನಗತ್ಯವಾಗಿ ವಿವಾದ ಎಬ್ಬಿಸುತ್ತಿದ್ದಾರೆ. ನ್ಯಾಯಾಲಯವೂ ಈ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿಲ್ಲ. ಸಾವಿರಾರು ಮಂದಿ ರೈತರಿಗೆ ಅನುಕೂಲವಾಗುತ್ತದೆ ಎನ್ನುವುದಾದರೆ ನಿರಾಣಿ ಅವರಿಗೆ ಬೆಂಬಲ ಏಕೆ ನೀಡಬಾರದು ಎಂದು ಪ್ರಶ್ನಿಸಿದರು.</p>.<p>ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಮಾತನಾಡಿ, ‘ಕಬ್ಬು ಅರೆಯಲು ನಿರಾಣಿ ಶುಗರ್ಸ್ಗೆ ಯಾರೂ ಅಡಚಣೆ ಉಂಟು ಮಾಡಬಾರದು. ಒಂದು ವೇಳೆ ಇತರೆ ಸಕ್ಕರೆ ಕಾರ್ಖಾನೆಗಳು ತೊಂದರೆ ಕೊಟ್ಟಲ್ಲಿ ಪ್ರತಿ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಕರ್ನಾಟಕ ಕನ್ನಡ ವೇದಿಕೆಯ ಅಧ್ಯಕ್ಷ ಸುರೇಶ್ಬಾಬು, ಸಾಮಾಜಿಕ ಕಾರ್ಯಕರ್ತ ಮಹೇಶ್, ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಪರಿಸರವಾದಿ ಭಾನು ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>