ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸುಬ್ಬರಾಯರ ಕೆರೆಯ (ವಾರ್ಡ್ ನಂ 23) ಪಾಲಿಕೆ ಸದಸ್ಯೆ ಪ್ರಮಿಳಾ ಭರತ್, ‘ಪ್ರತಿಮೆಯನ್ನು ಪರಿಶೀಲನೆ ನಡೆಸಿದಾಗ ಹಾನಿಯಾಗಿರುವುದು ಕಂಡು ಬಂದಿದೆ. ಆದರೆ, ಸ್ಥಳದಲ್ಲಿ ಮದ್ಯದ ಬಾಟಲಿಗಳು ಕಂಡು ಬಂದಿಲ್ಲ. ಹಿಂದೆಯೂ ಇಲ್ಲಿರುವ ಭಗತ್ ಸಿಂಗ್ ನೇಣುಗಂಬ ಶಿಥಿಲಾವಸ್ಥೆಗೆ ತಲುಪಿತ್ತು. ಅದನ್ನು ಅಭಿವೃದ್ಧಿಪಡಿಸಲಾಗಿದೆ. ವಿಗ್ರಹಗಳು ಸೇರಿದಂತೆ ಇಡೀ ಉದ್ಯಾನವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು’ ಎಂದರು.