ತಹಶೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿರುಗಾಳಿ ಮಳೆಯಿಂದ ಎಲಚಗೆರೆ, ಶಿರಮಳ್ಳಿ ಭಾಗದ ತೋಟಗಾರಿಕೆ ಬೆಳೆಗಳು ಮಳೆಯಿಂದ ಸಂಪೂರ್ಣ ನಾಶವಾಗಿವೆ. ಜಿ.ಪಂ. ಅಧಿಕಾರಿಗಳು ಭಾನುವಾರ ಮಳೆಯಿಂದ ಹಾನಿಯಾದ ತೋಟ, ಜಮೀನು, ಮನೆಗಳಿಗೆ ಭೇಟಿ ನೀಡಿ ನಷ್ಟದ ಅಂದಾಜು ಮಾಡಲಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಕೃತಿ ವಿಕೋಪದಿಂದ ನಷ್ಟಕ್ಕೆ ಈಡಾದ ಗ್ರಾಮಸ್ಥರಿಗೆ ಶೀಘ್ರವಾಗಿ ಪರಿಹಾರ ಧನ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.