‘ಮಳೆಗಾಲ ನೋಡಿಕೊಂಡು ಮುಂಗಾರು ಹಂಗಾಮಿಗೆ ನೀರು ಕೊಡುವ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾವೇರಿ ಕಣಿವೆಯ ಜಲಾಶಯಗಳಿಂದ ನೀರು ಹರಿಸುವ ಅಧಿಕಾರ ನಮಗಿಲ್ಲ. ಜಲಾಶಯಗಳಲ್ಲಿನ ಸ್ಥಿತಿಗತಿ ಗಮನಿಸಿ, ಕೇಂದ್ರ ಜಲ ಆಯೋಗವೇ ತೀರ್ಮಾನ ತೆಗೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಈಚೆಗಷ್ಟೇ ಆಯೋಗ ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದಾರೆ’ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.