<p><strong>ಮೈಸೂರು: </strong>‘ಕೃಷಿ ಇಲಾಖೆಯೊಂದಿಗೆ ಜಂಟಿ ಕಾರ್ಯತಂತ್ರ ರೂಪಿಸಿ, ರಕ್ಕಸ ಮಿಡತೆಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗುರುವಾರ ಇಲ್ಲಿ ತಿಳಿಸಿದರು.</p>.<p>‘ಉತ್ತರ ಭಾರತದಲ್ಲಿ ರಕ್ಕಸ ಮಿಡತೆಗಳು ಈಗಾಗಲೇ ಬೆಳೆ ನಾಶ ಮಾಡುತ್ತಿವೆ. ಇವು ರಾಜ್ಯ ಪ್ರವೇಶಿಸದಂತೆ ಅಗತ್ಯ ಕ್ರಮ ಜಾರಿಗೊಳಿಸುತ್ತೇವೆ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಹೇಳಿದರು.</p>.<p>‘ಮಳೆಗಾಲ ನೋಡಿಕೊಂಡು ಮುಂಗಾರು ಹಂಗಾಮಿಗೆ ನೀರು ಕೊಡುವ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾವೇರಿ ಕಣಿವೆಯ ಜಲಾಶಯಗಳಿಂದ ನೀರು ಹರಿಸುವ ಅಧಿಕಾರ ನಮಗಿಲ್ಲ. ಜಲಾಶಯಗಳಲ್ಲಿನ ಸ್ಥಿತಿಗತಿ ಗಮನಿಸಿ, ಕೇಂದ್ರ ಜಲ ಆಯೋಗವೇ ತೀರ್ಮಾನ ತೆಗೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಈಚೆಗಷ್ಟೇ ಆಯೋಗ ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದಾರೆ’ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.</p>.<p><strong>ಹೈಕಮಾಂಡ್ ನಿರ್ಧಾರ:</strong> ‘ಎಚ್.ವಿಶ್ವನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ವಿಷಯದಲ್ಲಿ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಕೃಷಿ ಇಲಾಖೆಯೊಂದಿಗೆ ಜಂಟಿ ಕಾರ್ಯತಂತ್ರ ರೂಪಿಸಿ, ರಕ್ಕಸ ಮಿಡತೆಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗುರುವಾರ ಇಲ್ಲಿ ತಿಳಿಸಿದರು.</p>.<p>‘ಉತ್ತರ ಭಾರತದಲ್ಲಿ ರಕ್ಕಸ ಮಿಡತೆಗಳು ಈಗಾಗಲೇ ಬೆಳೆ ನಾಶ ಮಾಡುತ್ತಿವೆ. ಇವು ರಾಜ್ಯ ಪ್ರವೇಶಿಸದಂತೆ ಅಗತ್ಯ ಕ್ರಮ ಜಾರಿಗೊಳಿಸುತ್ತೇವೆ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಹೇಳಿದರು.</p>.<p>‘ಮಳೆಗಾಲ ನೋಡಿಕೊಂಡು ಮುಂಗಾರು ಹಂಗಾಮಿಗೆ ನೀರು ಕೊಡುವ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾವೇರಿ ಕಣಿವೆಯ ಜಲಾಶಯಗಳಿಂದ ನೀರು ಹರಿಸುವ ಅಧಿಕಾರ ನಮಗಿಲ್ಲ. ಜಲಾಶಯಗಳಲ್ಲಿನ ಸ್ಥಿತಿಗತಿ ಗಮನಿಸಿ, ಕೇಂದ್ರ ಜಲ ಆಯೋಗವೇ ತೀರ್ಮಾನ ತೆಗೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಈಚೆಗಷ್ಟೇ ಆಯೋಗ ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದಾರೆ’ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.</p>.<p><strong>ಹೈಕಮಾಂಡ್ ನಿರ್ಧಾರ:</strong> ‘ಎಚ್.ವಿಶ್ವನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ವಿಷಯದಲ್ಲಿ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>