ಪಿರಿಯಾಪಟ್ಟಣ: ಜಿಲ್ಲಾಧಿಕಾರಿಗಳ ಆದೇಶ ಪಾಲಿಸಿದ ತಾಲ್ಲೂಕಿನ ಗಿರುಗೂರಿನ ಮಿಳಿಂದ ವಿದ್ಯಾ ಸಂಸ್ಥೆಯು ಗುರುವಾರ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯನ್ನು ಶಾಲೆಗೆ 8ನೇ ತರಗತಿ ಪ್ರವೇಶಕ್ಕೆ ಅನುಮತಿ ನೀಡಿ ದಾಖಲು ಮಾಡಿಕೊಂಡಿದ್ದರಿಂದ ದಲಿತ ಸಂಘಟನೆಗಳ ಕಾರ್ಯಕರ್ತರು ವಾರದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿದರು.