ಠಾಣೆಗೆ ಬಂದ ಹುಣಸೂರು ಡಿಪೊ ವ್ಯವಸ್ಥಾಪಕ ವಿಪಿನ್ ಕೃಷ್ಣ, ‘ಹುಣಸೂರು– ಕೆ.ಆರ್.ನಗರ ಮುಖ್ಯರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ಈ ಮಾರ್ಗದಲ್ಲಿ ಬಸ್ಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ. ಶಾಲಾ ಸಮಯದಲ್ಲಿ ಬಸ್ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಕೆಲ ತಾಂತ್ರಿಕ ಸಮಸ್ಯೆಯಿಂದ ಬಸ್ಗಳ ಸಂಚಾರದಲ್ಲಿ ವಿಳಂಬವಾಗಿದೆ’ ಎಂದು ಸ್ಪಷ್ಟಪಡಿಸಿದರು.