ಬಡ ಮತ್ತು ಮಧ್ಯಮ ವರ್ಗದವರು ಈಗಾಗಲೇ ಕೋವಿಡ್ನಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ವೇತನ ಕಡಿತ, ಉದ್ಯೋಗ ನಷ್ಟ ಸೇರಿದಂತೆ ಹಲವು ಕ್ರಮಗಳಿಂದ ಜೀವನ ನಡೆಸುವುದೇ ದುಸ್ತರವಾಗಿದೆ. ಈ ಹೊತ್ತಿನಲ್ಲಿ ಶುಲ್ಕ ಏರಿಕೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್ ಪ್ರವೇಶಾತಿಯಿಂದ ದೂರ ಉಳಿಯುವಂತೆ ಮಾಡಿದೆ ಎಂದು ಕಿಡಿಕಾರಿದರು.